ADVERTISEMENT

ಜೈನ ಮುನಿ ಕೊಲೆ ಪ್ರಕರಣ ಸಿಐಡಿಗೆ: ಮುಖ್ಯಮಂತ್ರಿ ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 19 ಜುಲೈ 2023, 19:18 IST
Last Updated 19 ಜುಲೈ 2023, 19:18 IST
   

ಬೆಂಗಳೂರು: ಚಿಕ್ಕೋಡಿ ಹಿರೇಕೋಡಿ ನಂದಿ ಪರ್ವತ ಆಶ್ರಮದ ಕಾಮಕುಮಾರ ನಂದಿ ಮಹಾರಾಜ ಮುನಿ ಕೊಲೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾಯಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದರು.

ವಿಧಾನಸಭೆಯಲ್ಲಿ ಬುಧವಾರ ಹೇಳಿಕೆ ನೀಡಿದ ಅವರು, ‘ಜೈನ ಮುನಿ ಕೊಲೆ ಪ್ರಕರಣದಲ್ಲಿ ನಾರಾಯಣ ಮಾಳಿ, ಹಸನ್‌ಸಾಬ ಮಕ್ಬೂಲ್‌ ದಲಾಯತ್‌ ಅವರನ್ನು ಬಂಧಿಸಲಾಗಿದೆ. ಹಣಕಾಸಿನ ವ್ಯವಹಾರದ ಸಂಬಂಧ ಕೊಲೆ ನಡೆದಿದೆ ಎಂಬುದು ವಿಚಾರಣೆ ವೇಳೆ ಗೊತ್ತಾಗಿದೆ. ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾವಣೆ ಮಾಡಲಾಗುವುದು’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT