ADVERTISEMENT

ಜಮ್ಮು ಕಾಶ್ಮೀರದಲ್ಲಿ ಹಾವೇರಿಯ ಯೋಧ ಹುತಾತ್ಮ

​ಪ್ರಜಾವಾಣಿ ವಾರ್ತೆ
Published 23 ಅಕ್ಟೋಬರ್ 2018, 10:05 IST
Last Updated 23 ಅಕ್ಟೋಬರ್ 2018, 10:05 IST
   

ಹಾವೇರಿ: ಜಿಲ್ಲೆಯ ಸವಣೂರ ತಾಲ್ಲೂಕಿನ ಕಲಿವಾಳ ಗ್ರಾಮದ ಯೋಧ ದೇವರಾಜ ಗುಳಗಂದಿ (28) ಮಂಗಳವಾರ ಬೆಳಿಗ್ಗೆ ಜಮ್ಮು ಕಾಶ್ಮೀರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಗುಂಡುತಗುಲಿ ಹುತಾತ್ಮರಾಗಿದ್ದಾರೆ.

ದೇವರಾಜ ಅವಿವಾಹಿತರಾಗಿದ್ದು, 6 ವರ್ಷಗಳ ಹಿಂದೆ ಸೇನೆಗೆ ಸೇರಿದ್ದರು.

ಬುಧವಾರ ಮಧ್ಯಾಹ್ನ ವೀರಯೋಧನ ಪಾರ್ಥಿವ ಶರೀರ ಹುಟ್ಟೂರಿಗೆ ಬರುವ ಸಾಧ್ಯತೆ ಇದೆ ಎಂದು ಜಿಲ್ಲಾಡಳಿತ ಮೂಲಗಳು ತಿಳಿಸಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.