ಹುಬ್ಬಳ್ಳಿ: ದೆಹಲಿಯಲ್ಲಿ ನಡೆಯುತ್ತಿರುವ ರೈತರ ಹೋರಾಟ ಬೆಂಬಲಿಸಿ ಜ. 20ರಂದು ಕಾಂಗ್ರೆಸ್ ವತಿಯಿಂದ ರಾಜಭವನ ಚಲೋ ನಡೆಸಲಾಗುವುದು ಎಂದು ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.
ಬೆಳಗಾವಿ ವಿಭಾಗ ಮಟ್ಟದ ಸಂಕಲ್ಪ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಕೇಂದ್ರದ ರೈತರ ವಿರೋಧಿ ಕೃಷಿನೀತಿ ಖಂಡಿಸಿ ನಡೆಯುತ್ತಿರುವ ಹೋರಾಟ ಮುಂದುವರೆಯಲಿದೆ. ರಾಜಭವನ ಚಲೋದಲ್ಲಿ ರಾಜ್ಯದ ಎಲ್ಲ ವಿಧಾನಸಭಾ ಕ್ಷೇತ್ರಗಳಿಂದ ಕಾರ್ಯ ಕರ್ತರು ಬಸ್ಗಳಲ್ಲಿ ಬರಲಿದ್ದಾರೆ ಎಂದು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.