ADVERTISEMENT

ರೆಡ್ಡಿ ಬಿಜೆಪಿಯಲ್ಲಿ ಇಲ್ಲ: ಬಿಎಸ್‌ವೈ

​ಪ್ರಜಾವಾಣಿ ವಾರ್ತೆ
Published 8 ನವೆಂಬರ್ 2018, 20:30 IST
Last Updated 8 ನವೆಂಬರ್ 2018, 20:30 IST

ಮಂಗಳೂರು:ಜಾರಿ ನಿರ್ದೆಶನಾಲಯ (ಇ.ಡಿ) ತನಿಖೆ ಮೇಲೆ ಪ್ರಭಾವ ಬೀರುವುದಾಗಿ ₹ 20 ಕೋಟಿ ಡೀಲ್‌ ನಡೆಸಿದ ಆರೋಪ ಹೊತ್ತಿರುವ ಜನಾರ್ದನ ರೆಡ್ಡಿ ಪ್ರಕರಣದ ಬಗ್ಗೆ ತಮಗೆ ಯಾವುದೇ ಮಾಹಿತಿ ಇಲ್ಲ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಹೇಳಿದ್ದಾರೆ.

ಗುರುವಾರ ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಡನೆ ಮಾತನಾಡಿದ ಅವರು, ‘ಕಾನೂನು ಪ್ರಕಾರ ಯಾವೆಲ್ಲಾ ಪ್ರಕ್ರಿಯೆ ನಡೆಸಬೇಕೋ, ಅವುಗಳನ್ನು ನಡೆಸಲೇಬೇಕು. ಅದಕ್ಕೂ, ಪಕ್ಷಕ್ಕೂ ಯಾವುದೇ ಸಂಬಂಧವೇ ಇಲ್ಲ. ಅಷ್ಟಕ್ಕೂ ಅವರು ಬಿಜೆಪಿಯಲ್ಲಿಯೇ ಇಲ್ಲ’ ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT