ಗಂಗಾವತಿ (ಕೊಪ್ಪಳ ಜಿಲ್ಲೆ): ‘ಮಾಜಿ ಸಚಿವ ಜನಾರ್ದನ ರೆಡ್ಡಿ ಅವರು ಗಂಗಾವತಿಯಲ್ಲಿ ಮನೆ ಖರೀದಿಸಿದ್ದಾರೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಅವರು ಇಲ್ಲಿಂದಲೇ ಸ್ಪರ್ಧಿಸುವರು’ ಎಂಬ ಚರ್ಚೆ ರಾಜಕೀಯ ವಲಯದಲ್ಲಿ ನಡೆಯುತ್ತಿದೆ.
ಬಹುಕೋಟಿ ಗಣಿ ಹಗರಣದ ಆರೋಪದಲ್ಲಿ ಬಂಧಿತರಾಗಿದ್ದ ರೆಡ್ಡಿ ಅವರಿಗೆ ಷರತ್ತುಗಳ ಅನ್ವಯ 2015ರಲ್ಲಿ ಜಾಮೀನು ನೀಡಿದ ಸುಪ್ರೀಂ ಕೋರ್ಟ್, ‘ಕರ್ನಾಟಕದ ಬಳ್ಳಾರಿ, ಆಂಧ್ರ ಪ್ರದೇಶದ ಕಡಪ, ಅನಂತಪುರಕ್ಕೆ ಭೇಟಿ ನೀಡಬಾರದು’ ಎಂಬ ಷರತ್ತು ವಿಧಿಸಿದೆ.
ಸಚಿವ ಶ್ರೀರಾಮುಲು ಬೆಂಬಲದಿಂದ ರಾಜಕೀಯ ಪ್ರವೇಶಿಸಿ, ಮತ್ತೆ ನೆಲೆ ಕಂಡುಕೊಳ್ಳಲು ಬಯಸಿರುವ ರೆಡ್ಡಿ ಅವರಿಗೆ ಬಿಜೆಪಿಯ ಭಿನ್ನ ನಿಲುವು ಅಡ್ಡಿಯಾಗಿದೆ. ಆದ್ದರಿಂದ ಕೆಲ ದಿನಗಳ ಹಿಂದೆ ರೆಡ್ಡಿ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದರು.
‘ಸದ್ಯಕ್ಕೆ ರಾಜಕೀಯದ ಮಾತು ಬೇಡ. ಭತ್ತದನಾಡು ಗಂಗಾವತಿಯಲ್ಲೇ ವಾಸವಿರಲು ಮನೆ ಖರೀದಿಸಿದ್ದೇನೆ. ಡಿಸೆಂಬರ್ ಅಂತ್ಯದಲ್ಲಿ ವಿಶೇಷ ಪೂಜೆನಡೆಸಿ, ಗೃಹ ಪ್ರವೇಶ ಮಾಡಲಾಗು ವುದು’ ಎಂದು ಜನಾರ್ದನ ರೆಡ್ಡಿ ಸುದ್ದಿಗಾರರಿಗೆ ತಿಳಿಸಿದರು. ಗಂಗಾವತಿಯಲ್ಲಿ ನಡೆದ ಸಂಕೀರ್ತನಾ ಯಾತ್ರೆಯಲ್ಲಿ ಪಾಲ್ಗೊಂಡಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.