
ಪ್ರಜಾವಾಣಿ ವಾರ್ತೆ
ಕೊಪ್ಪಳ: ‘ಬಳ್ಳಾರಿ ಬ್ಯಾನರ್ ಗಲಾಟೆಗೆ ಸಂಬಂಧಿಸಿದಂತೆ ನ್ಯಾಯ ಪಡೆದುಕೊಳ್ಳಲು ಕಾನೂನು ಹೋರಾಟ ನಡೆಸಲು ನಿರ್ಧರಿಸಿದ್ದೇನೆ. ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸುವೆ’ ಎಂದು ಶಾಸಕ ಜನಾರ್ದನ ರೆಡ್ಡಿ ಹೇಳಿದರು.
ಸೋಮವಾರ ಇಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ‘ಕೋರ್ಟ್ಗೆ ಹೋಗುವುದು ಬಿಟ್ಟು ಬೇರೆ ಮಾರ್ಗವಿಲ್ಲ. ಇಬ್ಬರು ಪೊಲೀಸ್ ಅಧಿಕಾರಿಗಳು, ಶಾಸಕರ ವಿರುದ್ಧ ಕಾನೂನು ಹೋರಾಟ ಮಾಡುವೆ’ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.