ADVERTISEMENT

ಆ್ಯಂಬಿಡೆಂಟ್ ಕಂಪನಿ ವಂಚನೆ ಪ್ರಕರಣ: ಜನಾರ್ದನರೆಡ್ಡಿಗೆ ಜಾಮೀನು

​ಪ್ರಜಾವಾಣಿ ವಾರ್ತೆ
Published 14 ನವೆಂಬರ್ 2018, 18:12 IST
Last Updated 14 ನವೆಂಬರ್ 2018, 18:12 IST
   

ಬೆಂಗಳೂರು:ಆ್ಯಂಬಿಡೆಂಟ್ ವಂಚನೆ ಪ್ರಕರಣದಲ್ಲಿ ಜೈಲು ಸೇರಿದ್ದ ಮಾಜಿ ಸಚಿವ ಗಾಲಿ ಜನಾರ್ದನರೆಡ್ಡಿ ಅವರಿಗೆ 1ನೇ ಎಸಿಎಂಎಂ ನ್ಯಾಯಾಲಯ ಬುಧವಾರ ಜಾಮೀನು ಮಂಜೂರು ಮಾಡಿತು.

ರಾತ್ರಿ 8 ಗಂಟೆಗೆ ಜೈಲಿನಿಂದ ಬಿಡುಗಡೆಯಾದ ರೆಡ್ಡಿ, ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಸಿಸಿಬಿ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ‘2006ರಲ್ಲಿ ನಾನು, ಕುಮಾರಸ್ವಾಮಿ ವಿರುದ್ಧ 150 ಕೋಟಿಯ ಲಂಚದ ಆರೋಪ ಮಾಡಿದ್ದೆ. ಅದಕ್ಕೆ 12 ವರ್ಷಗಳ ಬಳಿಕ ಅವರು ಸೇಡು ತೀರಿಸಿಕೊಂಡಿದ್ದಾರೆ’ಎಂದು ಆರೋಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT