ADVERTISEMENT

ಜನತಾ ಪರಿವಾರದ ನಾಯಕ ಎಂ.ರಘುಪತಿ ನಿಧನ

​ಪ್ರಜಾವಾಣಿ ವಾರ್ತೆ
Published 18 ಜೂನ್ 2022, 7:05 IST
Last Updated 18 ಜೂನ್ 2022, 7:05 IST
ಎಂ.ರಘುಪತಿ
ಎಂ.ರಘುಪತಿ    

ಬೆಂಗಳೂರು: ಜನತಾ ಪರಿವಾರದ ನಾಯಕರಲ್ಲಿ ಒಬ್ಬರಾಗಿದ್ದ , ಮಾಜಿ ಶಿಕ್ಷಣ ಸಚಿವ ಎಂ.ರಘುಪತಿ (81) ಶನಿವಾರ ಮುಂಜಾನೆ ನಿಧನರಾದರು.

ಕಳೆದ ಎಂಟು ದಿನಗಳಿಂದ ಅವರು ಅನಾರೋಗ್ಯಕ್ಕೆ ತುತ್ತಾಗಿದ್ದರು.

ರಾಮಕೃಷ್ಣ ಹೆಗಡೆ ನೇತೃತ್ವದ ಜನತಾ ಪಕ್ಷದ ಸರ್ಕಾರದಲ್ಲಿ ಉನ್ನತ ಶಿಕ್ಷಣ ಸಚಿವರಾಗಿ ಕೆಲಸ ಮಾಡಿದ್ದರು.

ADVERTISEMENT

ಶಿವಾಜಿನಗರ, ಮಲ್ಲೇಶ್ವರ ವಿಧಾನಸಭಾ ಕ್ಷೇತ್ರಗಳಿಂದ ಆಯ್ಕೆಯಾಗಿದ್ದ ಅವರು, ಒಂದು ಬಾರಿ ವಿಧಾನ ಪರಿಷತ್ತಿನ ಸದಸ್ಯರಾಗಿದ್ದರು.

ಇತ್ತೀಚಿನ ವರ್ಷಗಳಲ್ಲಿ ಸಕ್ರಿಯ ರಾಜಕಾರಣದಿಂದ ದೂರ ಉಳಿದಿದ್ದರು.

ರಘುಪತಿ ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕ ದರ್ಶನಕ್ಕೆ, ಮಲ್ಲೇಶ್ವರದಲ್ಲಿರುವ ಅವರ ನಿವಾಸದಲ್ಲಿ ಇರಿಸಲಾಗಿದೆ. ಭಾನುವಾರ ಬೆಳಿಗ್ಗೆ ಮೃತರ ಅಂತ್ಯಕ್ರಿಯೆ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.