ADVERTISEMENT

ರಮೇಶ ಜಾರಕಿಹೊಳಿ ವಿರುದ್ಧದ ವಂಚನೆ ಆರೋಪ: ಸರ್ಕಾರಕ್ಕೆ ನೋಟಿಸ್

​ಪ್ರಜಾವಾಣಿ ವಾರ್ತೆ
Published 19 ಜನವರಿ 2024, 16:09 IST
Last Updated 19 ಜನವರಿ 2024, 16:09 IST
ರಮೇಶ ಜಾರಕಿಹೊಳಿ
ರಮೇಶ ಜಾರಕಿಹೊಳಿ   

ಬೆಂಗಳೂರು: ‘ಸಕ್ಕರೆ ಕಾರ್ಖಾನೆ ಅಭಿವೃದ್ಧಿಗಾಗಿ ಪಡೆದಿರುವ ಸಾಲ ಮತ್ತು ಬಡ್ಡಿ ಹಣ ಸೇರಿ ಒಟ್ಟು ₹439 ಕೋಟಿ ಮೊತ್ತವನ್ನು ಪಾವತಿ ಮಾಡದೆ ವಂಚಿಸಲಾಗಿದೆ ಎಂಬ ಆರೋಪದಡಿ ನನ್ನ ವಿರುದ್ಧ ದಾಖಲಿಸಿರುವ ದೂರು ಮತ್ತು ಎಫ್ಐಆರ್ ರದ್ದುಪಡಿಸಬೇಕು’ ಎಂದು ಕೋರಿ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.

ಈ ಸಂಬಂಧ ರಮೇಶ ಜಾರಕಿಹೊಳಿ, ವಸಂತ್ ಪಾಟೀಲ್ ಮತ್ತು ಶಂಕರ್ ಪವಾಡೆ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.

ಕರ್ನಾಟಕ ರಾಜ್ಯ ಸಹಕಾರ ಅಪೆಕ್ಸ್ ಬ್ಯಾಂಕ್ ಲಿಮಿಟೆಡ್ ಮತ್ತು ರಾಜ್ಯ ಸರ್ಕಾರಕ್ಕೆ ನೋಟಿಸ್‌ ಜಾರಿಗೊಳಿಸಲು ಆದೇಶಿಸಿದ ನ್ಯಾಯಪೀಠ ವಿಚಾರಣೆ ಮುಂದೂಡಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.