ADVERTISEMENT

ಮುಖ್ಯಮಂತ್ರಿಯಾಗಿ... ಅಲ್ಲಲ್ಲ ಮಂತ್ರಿಯಾಗಿ ಪ್ರಮಾಣ ಮಾಡುತ್ತೇನೆ!

​ಪ್ರಜಾವಾಣಿ ವಾರ್ತೆ
Published 20 ಆಗಸ್ಟ್ 2019, 6:36 IST
Last Updated 20 ಆಗಸ್ಟ್ 2019, 6:36 IST
   

ಬೆಂಗಳೂರು: ರಾಜಭವನದಲ್ಲಿ ಇಂದು ನಡೆದ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಹಾಸ್ಯ ಪ್ರಸಂಗವೊಂದು ನಡೆಯಿತು. ಚಿಕ್ಕನಾಯಕನಹಳ್ಳಿ ಶಾಸಕ ಜೆ.ಸಿ ಮಾಧುಸ್ವಾಮಿ ಅವರು ಪ್ರತಿಜ್ಞಾ ವಿಧಿ ಸ್ವೀಕರಿಸುವಾಗ ಎಡವಟ್ಟು ಮಾಡಿಕೊಂಡರು.

ವೇದಿಕೆಗೆ ಬಂದ ಮಾಧುಸ್ವಾಮಿ ಅವರು ಪ್ರಮಾಣ ವಚನ ಸ್ವೀಕರಿಸುತ್ತಾ ‘ನಾನು ರಾಜ್ಯದ ಮುಖ್ಯಮಂತ್ರಿಯಾಗಿ... ಅಲ್ಲಲ್ಲ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತೇನೆ,’ ಎಂದು ಹೇಳಿದ್ದು ಸಮಾರಂಭವನ್ನು ನಗೆಗಡಲಲ್ಲಿ ತೇಲುವಂತೆ ಮಾಡಿತು. ಸ್ವತಃ ಜೆ.ಸಿ ಮಾಧುಸ್ವಾಮಿ ಅವರೂ ಸಂಕೋಚಗೊಂಡರು.

ಪಕ್ಕದಲ್ಲೇ ಗಂಭೀರವದನರಾಗಿ ನಿಂತಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಅವರೂ ಒಂದು ಕ್ಷಣ ನಸುನಕ್ಕರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.