ಹುಬ್ಬಳ್ಳಿ: ಜೆಡಿಎಸ್ -ಕಾಂಗ್ರೆಸ್ ಹೊಂದಾಣಿಕೆ ಮಾಡಿಕೊಂಡೇ ಲೋಕಸಭೆ ಚುನಾವಣೆ ಎದುರಿಸುತ್ತೇವೆ ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ವಿಶ್ವನಾಥ ಹೇಳಿದರು.
ಶನಿವಾರ ಸುದ್ದಿಗಾರರ ಜತೆ ಮಾತನಾಡಿದ ಅವರು,ಕೋಮುವಾದಿಗಳನ್ನು ಮಣಿಸುವ ಉದ್ದೇಶದಿಂದ ಹೊಂದಾಣಿಕೆ ಮಾಡಿಕೊಂಡಿದ್ದೇವೆ. ಎಲ್ಲಾ ಜಾತ್ಯತೀತ ಪಕ್ಷಗಳು ಒಂದಾಗುತ್ತಿವೆ ಎಂದರು.
ದೇಶದಲ್ಲಿ ಪ್ರಜಾಪ್ರಭುತ್ವ ಉಳಿಯಬೇಕು. ಪ್ರಧಾನಿ ಸಂಸತ್ಗೆ ಹೊಗುತ್ತಿಲ್ಲ.ಸಂಸತ್ತು ಪ್ರಜಾಪ್ರಭುತ್ವದ ಸಾರ್ವಭೌಮ. ಅಲ್ಲಿಗೆ ಹೋಗದೆ ನುಣುಚಿಕೊಳ್ಳುತ್ತಿದ್ದಾರೆ ಎಂದು ಟೀಕಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.