ADVERTISEMENT

ಜೆಡಿಎಸ್ ಜೊತೆ ಸಮನ್ವಯ: 'ಕೈ' ಸಭೆ

​ಪ್ರಜಾವಾಣಿ ವಾರ್ತೆ
Published 2 ಏಪ್ರಿಲ್ 2019, 19:03 IST
Last Updated 2 ಏಪ್ರಿಲ್ 2019, 19:03 IST

ಬೆಂಗಳೂರು:ಮಂಡ್ಯ ಕ್ಷೇತ್ರದಲ್ಲಿ ಜೆಡಿಎಸ್ - ಕಾಂಗ್ರೆಸ್ ನಡುವೆ ಸಮನ್ವಯ ಸಾಧಿಸಿ ಕೆಲಸ ಮಾಡುವ ಹಿನ್ನೆಲೆಯಲ್ಲಿ ಮಂಗಳವಾರ ರಾತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ನಡೆಯಿತು.

ಸಿದ್ದರಾಮಯ್ಯ ಅವರ ನಿವಾಸ 'ಕಾವೇರಿ'ಯಲ್ಲಿ ನಡೆದ ಸಭೆಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ವಿಧಾನಸಭಾ ಕ್ಷೇತ್ರಗಳಲ್ಲಿ ಪರಾಜಿತ ಕಾಂಗ್ರೆಸ್ ಅಭ್ಯರ್ಥಿಗಳು ಮತ್ತು ಹಿರಿಯ ಮುಖಂಡರು ಸಭೆ ಭಾಗವಹಿಸಿದರು.

ಮಂಡ್ಯದಲ್ಲಿ ಮೈತ್ರಿ ಕೂಟದ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರ ಕಾಂಗ್ರೆಸ್ ನ ಸ್ಥಳೀಯ ಮುಖಂಡರು ಮತ್ತು ಕಾರ್ಯಕರ್ತರು ಕೆಲಸ ಮಾಡುತ್ತಿಲ್ಲ ಎಂಬ ಆರೋಪದ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಸೂಚನೆಯಂತೆ ಸಿದ್ದರಾಮಯ್ಯ ಈ ಸಭೆ ನಡೆಸಿದ್ದಾರೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಪರಾಜಿತರಾದ ಎಲ್ಲ ಮುಖಂಡರಿಗೂ ಸಭೆಗೆ ಬರುವಂತೆ ಬುಲಾವ್ ನೀಡಲಾಗಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.