ADVERTISEMENT

ಹೊರಟ್ಟಿ ವಿರುದ್ಧ ಜೆಡಿಎಸ್‌ನ ಗಡದಿನ್ನಿ

ವಿಧಾನ ಪರಿಷತ್: ಶಿಕ್ಷಕರ ಎರಡು ಕ್ಷೇತ್ರಗಳಿಗೆ ಜೆಡಿಎಸ್ ಅಭ್ಯರ್ಥಿ ಹೆಸರು ಪ್ರಕಟ

​ಪ್ರಜಾವಾಣಿ ವಾರ್ತೆ
Published 23 ಮೇ 2022, 20:09 IST
Last Updated 23 ಮೇ 2022, 20:09 IST
ಶ್ರೀಶೈಲ ನಿಂಗಪ್ಪ ಗಡದಿನ್ನಿ
ಶ್ರೀಶೈಲ ನಿಂಗಪ್ಪ ಗಡದಿನ್ನಿ   

ಬೆಂಗಳೂರು: ಪಶ್ಚಿಮ ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್‌ಗೆ ನಡೆಯಲಿರುವ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ವಿರುದ್ಧ ಶ್ರೀಶೈಲ ನಿಂಗಪ್ಪ ಗಡದಿನ್ನಿ ಅವರನ್ನು ಕಣಕ್ಕಿಳಿಸಲು ಜೆಡಿಎಸ್ ನಿರ್ಧರಿಸಿದೆ.

ಸುದ್ದಿಗೋಷ್ಠಿಯಲ್ಲಿ ಸೋಮವಾರ ಮಾತನಾಡಿದ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ, ‘ನಮ್ಮ ಪಕ್ಷ ಬಿಟ್ಟು ಹೊರಟ್ಟಿ ಅವರು ಬಿಜೆಪಿಗೆ ಹೋಗಿ ಚುನಾವಣೆಗೆ ನಿಂತಿದ್ದಾರೆ. ಬಿಜೆಪಿ ಸರ್ಕಾರದಲ್ಲಿ ಅವರಿಗೆ ಯಾವ ರೀತಿ ನ್ಯಾಯ ಸಿಕ್ಕಿದೆ ಎಂಬುದು ಗೊತ್ತಿಲ್ಲ. ನಾವು ಸ್ಪರ್ಧೆಯಿಂದ ಹಿಂದೆ ಸರಿಯುವುದಿಲ್ಲ. ವಾಯವ್ಯ ಶಿಕ್ಷಕರ ಕ್ಷೇತ್ರದಿಂದ ಚಂದ್ರಶೇಖರ ಇ. ಲೋಣಿ ಅವರಿಗೆ ಟಿಕೆಟ್ ನೀಡಲಾಗಿದೆ’ ಎಂದರು. ‘ಜೂನ್‌ 3ರ ನಂತರ ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ಎರಡು ದಿನ ಪ್ರವಾಸ ಮಾಡಿ ಮತಯಾಚನೆ ಮಾಡುತ್ತೇನೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT