ADVERTISEMENT

ಟಿಕಾಯತ್ ವಿರುದ್ಧದ ಕೇಸು ರದ್ದಾಗಬೇಕು: ಎಚ್.ಡಿ ಕುಮಾರಸ್ವಾಮಿ

​ಪ್ರಜಾವಾಣಿ ವಾರ್ತೆ
Published 25 ಮಾರ್ಚ್ 2021, 4:38 IST
Last Updated 25 ಮಾರ್ಚ್ 2021, 4:38 IST
ರೈತ ನಾಯಕ ರಾಕೇಶ್ ಟಿಕಾಯತ್
ರೈತ ನಾಯಕ ರಾಕೇಶ್ ಟಿಕಾಯತ್   

ಬೆಂಗಳೂರು: ರೈತ ಸಂಘಟನೆಯ ಮುಖಂಡ ರಾಕೇಶ್ ಟಿಕಾಯತ್ ಅವರ ವಿರುದ್ಧ ರಾಜ್ಯದಲ್ಲಿ ದಾಖಲಾಗಿರುವ ಪ್ರಕರಣಗಳನ್ನು ಕೈಬಿಡಬೇಕು ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ಎಚ್.ಡಿ ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಕುಮಾರಸ್ವಾಮಿ ಅವರು, ರೈತ ನಾಯಕ ರಾಕೇಶ್ ಟಿಕಾಯತ್ ವಿರುದ್ಧ ಶಿವಮೊಗ್ಗ, ಹಾವೇರಿಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಚೋದನಕಾರಿ ಭಾಷಣ ಮಾಡಿದ ಆರೋಪ ಅವರ ಮೇಲಿದೆ.

ರೈತರ ಧ್ವನಿ ಹತ್ತಿಕ್ಕುವ ಸರ್ಕಾರದ ಪ್ರಯತ್ನಗಳಿವು. ಪ್ರಚೋದನಕಾರಿ ಭಾಷಣದ ಆರೋಪದ ಮೇಲೆ ನಿಜಕ್ಕೂ ಕೇಸು ದಾಖಲಿಸುವುದೇ ಆದರೆ ಬಿಜೆಪಿಯ ಎಷ್ಟು ನಾಯಕರ ಮೇಲೆ ಎಷ್ಟೆಷ್ಟು ಪ್ರಕರಣ ದಾಖಲಾಗಬೇಕಿತ್ತು?

ADVERTISEMENT

ಹೋರಾಟ ಮಾಡಲು ರೈತರು ದೆಹಲಿಗೇ ಬರಬೇಕಿಲ್ಲ, ದೆಹಲಿಯಂತೆ ಇಲ್ಲೇ ಹೋರಾಟ ಮಾಡಿ ಎಂಬ ಟಿಕಾಯತ್ ಹೇಳಿಕೆಯಲ್ಲಿ ಪ್ರಚೋದನೆ ಏನೂ ಇಲ್ಲ. ಇದರಲ್ಲಿ ತಪ್ಪು ಕಂಡವರದ್ದು ಗ್ರಹಿಕೆ ದೋಷವಷ್ಟೇ.

ಹೋರಾಟ, ಹೋರಾಟಕ್ಕೆ ಕರೆ ನೀಡುವುದು ಸಂವಿಧಾನ ಬದ್ಧ. ಅವರು ಕೊಚ್ಚಿ ಎನ್ನಲಿಲ್ಲ, ಕೊಲ್ಲಿರಿ ಎನ್ನಲಿಲ್ಲ. ಟಿಕಾಯತ್ ವಿರುದ್ಧದ ಕೇಸು ರದ್ದಾಗಬೇಕು ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.