ADVERTISEMENT

ಇ.ಡಿ, ಐ.ಟಿ. ನನ್ನ ಕೈಯಲ್ಲಿದೆಯಾ? ಜಮೀರ್‌ಗೆ ಕುಮಾರಸ್ವಾಮಿ ತಿರುಗೇಟು

ನಾನು ಅಧಿಕಾರದಲ್ಲಿ ಇರಲಿ, ಬಿಡಲಿ ಬಹಳ ಜನರಿಗೆ ನನ್ನ ಮೇಲೆಯೇ ಕಣ್ಣು ಎಂದು ವ್ಯಂಗ್ಯವಾಡಿದ ಜೆಡಿಎಸ್‌ ನಾಯಕ

​ಪ್ರಜಾವಾಣಿ ವಾರ್ತೆ
Published 9 ಆಗಸ್ಟ್ 2021, 11:56 IST
Last Updated 9 ಆಗಸ್ಟ್ 2021, 11:56 IST
ಎಚ್‌.ಡಿ ಕುಮಾರಸ್ವಾಮಿ
ಎಚ್‌.ಡಿ ಕುಮಾರಸ್ವಾಮಿ    

ರಾಮನಗರ: ‘ಹೇಳಿ ದಾಳಿ ಮಾಡಿಸುವುದಕ್ಕೆ ಕೇಂದ್ರ ಸರ್ಕಾರ, ಇ.ಡಿ. ಮತ್ತು ಆದಾಯ ತೆರಿಗೆ ಇಲಾಖೆಯು ನನ್ನ ಕೈಯಲ್ಲಿದೆಯಾ’ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಪ್ರಶ್ನಿಸಿದರು.

‘ನನ್ನ ಮನೆ ಮೇಲಿನ ದಾಳಿಗೆ ಜೆಡಿಎಸ್ ನಾಯಕರೇ ಕಾರಣ’ ಎಂಬ ಶಾಸಕ ಜಮೀರ್‌ ಅಹಮ್ಮದ್ ಆರೋಪಕ್ಕೆ ಸೋಮವಾರ ಬಿಡದಿಯಲ್ಲಿ ಅವರು ಪ್ರತಿಕ್ರಿಯೆ ನೀಡಿದರು. ‘ಅವರ ಆರೋಪಗಳ ಬಗ್ಗೆ ಚರ್ಚೆ ಅನವಶ್ಯಕ. ನನಗೆ ಅದರ ಬಗ್ಗೆ ಆಸಕ್ತಿಯೂ ಇಲ್ಲ. ನಾನು ಅಧಿಕಾರದಲ್ಲಿ ಇರಲಿ, ಬಿಡಲಿ ಬಹಳ ಜನರಿಗೆ ನನ್ನ ಮೇಲೆಯೇ ಕಣ್ಣು' ಎಂದರು.

ADVERTISEMENT

‘ ನಾನು ಮುಖ್ಯಮಂತ್ರಿ ಆದರೂ ಉಳಿದವರಂತೆ ದೊಡ್ಡ ಕೈಗಾರಿಕೆ, ಶಿಕ್ಷಣ ಸಂಸ್ಥೆಗಳನ್ನು ತೆರೆದಿಲ್ಲ. ಬಿಡದಿಯಲ್ಲಿ ಕೃಷಿ ಮಾಡಿಕೊಂಡು ಇದ್ದೇನೆ. ಜೊತೆಗೆ ಪಕ್ಷ ಸಂಘಟನೆಗೆ ಏನು ಬೇಕೋ ಅದನ್ನಷ್ಟೇ ಮಾಡಿಕೊಂಡು ಹೋಗುತ್ತಿದ್ದೇನೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.