ADVERTISEMENT

ಎಚ್‌ಡಿಕೆ ಮತ್ತೆ ಸಿಎಂ ಆಗಲೆಂದು ಮಹದೇಶ್ವರ ಬೆಟ್ಟಕ್ಕೆ ಅಭಿಮಾನಿಗಳ ಪಾದಯಾತ್ರೆ

​ಪ್ರಜಾವಾಣಿ ವಾರ್ತೆ
Published 31 ಮಾರ್ಚ್ 2023, 9:51 IST
Last Updated 31 ಮಾರ್ಚ್ 2023, 9:51 IST
ತುಮಕೂರು ಜಿಲ್ಲೆಯ ಪಾದಯಾತ್ರಿ ಎಸ್.ಎ. ಅಶೋಕ್
ತುಮಕೂರು ಜಿಲ್ಲೆಯ ಪಾದಯಾತ್ರಿ ಎಸ್.ಎ. ಅಶೋಕ್   

ಹನೂರು: ‘ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಮತ್ತೊಮ್ಮೆ ಮುಖ್ಯಮಂತ್ರಿಯಾಗಲಿ’ ಎಂದು ಹರಕೆ ಹೊತ್ತ ತುಮಕೂರು ಜಿಲ್ಲೆಯ ಮೂವರು ಅಭಿಮಾನಿಗಳು ಪಾದಯಾತ್ರೆ ಮೂಲಕ ಮಹದೇಶ್ವರ ಬೆಟ್ಟಕ್ಕೆ ತೆರಳಿದರು.

ಮಧುಗಿರಿ ತಾಲ್ಲೂಕಿನ ಶ್ರಾವಂಡನಹಳ್ಳಿಯ ಎಸ್.ಎ. ಅಶೋಕ್, ಜಗನ್ನಾಥ್, ಮೂರ್ತಿ ಎಂಬುವವರು ಯುಗಾದಿಯಂದು ಪಾದಯಾತ್ರೆ ಆರಂಭಿಸಿದ್ದು, ಗುರುವಾರ ಪಟ್ಟಣ ತಲುಪಿದರು.

‘ಎಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಬೇಕು. ಮಧುಗಿರಿ ಕ್ಷೇತ್ರದಲ್ಲಿ ವೀರಭದ್ರಯ್ಯ, ಗೌರಿಬಿದನೂರು ಕ್ಷೇತ್ರದಲ್ಲಿ ನರಸಿಂಹಮೂರ್ತಿ ಜಯಗಳಿಸಬೇಕು’ ಎಂದು ಹರಕೆ ಹೊತ್ತಿದ್ದಾರೆ.

ADVERTISEMENT

‘ಕುಮಾರಸ್ವಾಮಿ ರೈತರ ಸಾಲ ಮನ್ನಾ ಮಾಡಿದ್ದರು. ಲಾಟರಿ, ಸಾರಾಯಿ ನಿಷೇಧಿಸಿ ರಾಜ್ಯದ ಮಹಿಳೆಯರ ಕಣ್ಣೀರೊರೆಸಿದ್ದರು. ಅವರು ಮುಖ್ಯಮಂತ್ರಿಯಾದರೆ ರಾಜ್ಯದ ಸಮಗ್ರ ಅಭಿವೃದ್ಧಿಯಾಗುತ್ತದೆ’ ಎಂದು ಅಶೋಕ ವಿಶ್ವಾಸ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.