ಹುಬ್ಬಳ್ಳಿ: ನನ್ನ ಮುಂದೆ ಸದ್ಯ ಜೆಡಿಎಸ್, ತೃಣಮೂಲ ಕಾಂಗ್ರೆಸ್, ಸಮಾಜವಾದಿ ಪಕ್ಷಗಳೆಂಬ ಮೂರು ಆಯ್ಕೆಗಳಿವೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಎಂ. ಇಬ್ರಾಹಿಂ ಭಾನುವಾರ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿರುವ ಅವರು, ‘ಉತ್ತರ ಕರ್ನಾಟಕ ಪ್ರವಾಸ ಮಾಡುತ್ತೇನೆ. ನಿರೀಕ್ಷೆಗಿಂತ ಎರಡರಷ್ಟು ಬೆಂಬಲ ಸಿಗುತ್ತಿದೆ. ಸದ್ಯಕ್ಕೆ ನನಗೆ ಜೆಡಿಎಸ್, ಟಿಎಂಸಿ ಮತ್ತು ಸಮಾಜವಾದಿ ಪಕ್ಷ ಎಂಬ ಮೂರು ಆಯ್ಕೆಗಳಿವೆ. ಟಿಎಂಸಿ ಮತ್ತು ಸಮಾಜವಾದಿ ಪಕ್ಷದವರು ನನ್ನನ್ನು ಸಂಪರ್ಕಿಸುತ್ತಿದ್ದಾರೆ. ವಿಳಂಬ ಮಾಡುವುದಿಲ್ಲ. ಶೀಘ್ರವೇ ನಿರ್ಧಾರವನ್ನು ಪ್ರಕಟಿಸುತ್ತೇನೆ’ ಎಂದರು.
ಕರ್ನಾಟಕದಲ್ಲಿ ಚುನಾವಣೆಗೆ ಮುನ್ನವೇ ಅನೇಕರು ಕಾಂಗ್ರೆಸ್ ತೊರೆಯುತ್ತಾರೆ ಎಂದು ಅವರು ಹೇಳಿದರು.
ಕೂಡಲಸಂಗಮದಿಂದ ‘ಅಲಿಂಗ’ (ಅಲ್ಪಸಂಖ್ಯಾತರು, ಲಿಂಗಾಯತ) ಸಮಾವೇಶ ಮಾಡಲಾಗುವುದು. ಅದು ಪಕ್ಷಾತೀತವಾಗಿ ನಡೆಯಲಿದ್ದು, ಸ್ವಾಮೀಜಿಗಳು, ಸೂಫಿ ಸಂತರು ಭಾಗವಹಿಸಲಿದ್ದಾರೆ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.