ADVERTISEMENT

ರಾಕ್ ಲೈನ್ ವೆಂಕಟೇಶ್ ಮನೆಗೆ ಜೆಡಿಎಸ್ ಕಾರ್ಯಕರ್ತರಿಂದ ಮುತ್ತಿಗೆ ಯತ್ನ

​ಪ್ರಜಾವಾಣಿ ವಾರ್ತೆ
Published 10 ಜುಲೈ 2021, 3:11 IST
Last Updated 10 ಜುಲೈ 2021, 3:11 IST
ಜೆಡಿಎಸ್  ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಟೀಕಿಸಿದ್ದ ಚಿತ್ರ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಅವರ ಮನೆಗೆ ಜೆಡಿಎಸ್ ಕಾರ್ಯಕರ್ತರು ಶನಿವಾರ ಬೆಳಿಗ್ಗೆ ಮುತ್ತಿಗೆ ಹಾಕಲು ಯತ್ನಿಸಿದರು
ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಟೀಕಿಸಿದ್ದ ಚಿತ್ರ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಅವರ ಮನೆಗೆ ಜೆಡಿಎಸ್ ಕಾರ್ಯಕರ್ತರು ಶನಿವಾರ ಬೆಳಿಗ್ಗೆ ಮುತ್ತಿಗೆ ಹಾಕಲು ಯತ್ನಿಸಿದರು   

ಬೆಂಗಳೂರು: ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಟೀಕಿಸಿದ್ದ ಚಿತ್ರ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಅವರ ಮನೆಗೆ ಜೆಡಿಎಸ್ ಕಾರ್ಯಕರ್ತರು ಶನಿವಾರ ಬೆಳಿಗ್ಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.

ಮಂಡ್ಯದ ಕೆ ಆರ್ ಎಸ್ ಅಣೆಕಟ್ಟೆ ಸಮೀಪದ‌ ಬೇಬಿ ಬೆಟ್ಟದಲ್ಲಿ ನಡೆಯುತ್ತಿರುವ ಕಲ್ಲು ಗಣಿಗಾರಿಕೆಗೆ ಸಂಬಂಧಿಸಿದಂತೆ ಕುಮಾರಸ್ವಾಮಿ ಮತ್ತು ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ನಡುವೆ ಹಲವು ದಿನಗಳಿಂದ ವಾಕ್ಸಮರ ನಡೆಯುತ್ತಿದೆ. ಸುಮಲತಾ ಜತೆ ಗುರುತಿಸಿಕೊಂಡಿರುವ ರಾಕ್ ಲೈನ್ ವೆಂಕಟೇಶ್, ಶುಕ್ರವಾರ ಕುಮಾರಸ್ವಾಮಿ ಅವರನ್ನು ಕಟುವಾಗಿ ಟೀಕಿಸಿ ಹೇಳಿಕೆ ನೀಡಿದ್ದರು.

ತಮ್ಮ ನಾಯಕನನ್ನು ಟೀಕಿಸಿರುವುದಕ್ಕೆ ಸಿಟ್ಟಾಗಿರುವ ಜೆಡಿಎಸ್ ಕಾರ್ಯಕರ್ತರು, ಮಹಾಲಕ್ಷ್ಮಿ ಬಡಾವಣೆಯಲ್ಲಿರುವ ರಾಕ್ ಲೈನ್ ವೆಂಕಟೇಶ್ ಅವರ ಮನೆಗೆ ಮುತ್ತಿಗೆ ಹಾಕಲು ಶನಿವಾರ ಬೆಳಿಗ್ಗೆ ಯತ್ನಿಸಿದರು. ವೆಂಕಟೇಶ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ADVERTISEMENT

ಪ್ರತಿಭಟನೆಯ ಸುಳಿವು ಪಡೆದ ಪೊಲೀಸರು, ವೆಂಕಟೇಶ್ ನಿವಾಸದ ಬಳಿ ಬ್ಯಾರಿಕೇಡ್ ಅಳವಡಿಸಿದ್ದರು. ಸ್ಥಳದಲ್ಲಿ ಜಮಾಯಿಸಿದ ಜೆಡಿಎಸ್ ಕಾರ್ಯಕರ್ತರು, ಬ್ಯಾರಿಕೇಡ್ ಗಳನ್ನು ತಳ್ಳಿಕೊಂಡು ಮನೆಯ ಒಳಕ್ಕೆ ನುಗ್ಗಲು ಯತ್ನಿಸಿದರು.‌ ಹಲವು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.