ADVERTISEMENT

ಜ.20ರಿಂದ ವಿಧಾನಸಭೆ ಅಧಿವೇಶನ

​ಪ್ರಜಾವಾಣಿ ವಾರ್ತೆ
Published 12 ಡಿಸೆಂಬರ್ 2019, 20:15 IST
Last Updated 12 ಡಿಸೆಂಬರ್ 2019, 20:15 IST
   

ಬೆಂಗಳೂರು: ಉಪ ಚುನಾವಣೆಯಲ್ಲಿ ಭರ್ಜರಿ ಜಯಗಳಿಸಿ ಬಹುಮತ ಸಾಧಿಸಿರುವ ಬಿ.ಎಸ್‌.ಯಡಿಯೂರಪ್ಪ ನೇತೃತ್ವದ ಸರ್ಕಾರ 2020ರ ಜನವರಿ 20 ರಿಂದ 30 ರವರೆಗೆ ಜಂಟಿ ಅಧಿವೇಶನ ನಡೆಸಲು ತೀರ್ಮಾನಿಸಿದೆ.

ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ಅಧಿವೇಶನದ ಮೊದಲ ದಿನ ರಾಜ್ಯಪಾಲ ವಜುಭಾಯಿ ವಾಲಾ ಅವರು ಜಂಟಿ ಸದನವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.

ಅಧಿವೇಶನದಲ್ಲಿ ನಾಡಿನ ಹಲವು ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸುವುದರ ಜತೆಗೆ ಹಲವು ಮಸೂದೆಗಳಿಗೂ ಒಪ್ಪಿಗೆ ಪಡೆಯಲಾಗುವುದು ಎಂದು ಸಂಪುಟ ಸಭೆಯ ಬಳಿಕ ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.