ಹುಬ್ಬಳ್ಳಿ: ಭಿನ್ನಾಭಿಪ್ರಾಯ, ಆಂತರಿಕ ಕಚ್ಚಾಟದಿಂದ ಜರ್ಜರಿತವಾಗಿರುವ ಕಾಂಗ್ರೆಸ್–ಜೆಡಿಎಸ್ ಸಮ್ಮಿಶ್ರ ಸರ್ಕಾರ ಒಂದು ವೇಳೆ ಬಿದ್ದುಹೋದರೆ 105 ಶಾಸಕರನ್ನು ಹೊಂದಿರುವ ಬಿಜೆಪಿಯು ರಾಜ್ಯದಲ್ಲಿ ಸರ್ಕಾರ ರಚಿಸುವುದು ನಿಶ್ಚಿತ ಎಂದು ಶಾಸಕ ಜಗದೀಶ ಶೆಟ್ಟರ್ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ’ಜಿಂದಾಲ್ ಕಂಪನಿಗೆ ಕಡಿಮೆ ದರದಲ್ಲಿ ಸರ್ಕಾರ ಭೂಮಿ ಮಾರಾಟ ಮಾಡುವ ಮೂಲಕ ಕಮಿಷನ್ ದಂಧೆ ನಡೆಸಿದೆ. ರಾಜ್ಯದ ಯಾವುದೇ ಭಾಗದಲ್ಲಾದರೂ ಒಂದು ಎಕರೆ ಭೂಮಿ ಬೆಲೆ ಕನಿಷ್ಠ ₹ 10 ಲಕ್ಷಕ್ಕೂ ಅಧಿಕ ಇರುವಾಗ ಸರ್ಕಾರವು ಎಕರೆಗೆ ಕೇವಲ ₹1.22 ಲಕ್ಷದಂತೆ 3,667 ಎಕರೆ ಭೂಮಿಯನ್ನು ಕಡಿಮೆ ಬೆಲೆಗೆ ಮಾರಾಟ ಮಾಡಿರುವುದನ್ನು ವಿರೋಧಿಸಿ ಬಿಜೆಪಿ ಹೋರಾಟ ನಡೆಸಲಿದೆ’ ಎಂದು ಎಚ್ಚರಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.