ಬೆಂಗಳೂರು: ಗಲಭೆಯ ಸತ್ಯಾಂಶ ಹೊರಬರಬೇಕೆಂದರೆ ಹೈಕೋರ್ಟ್ ಹಾಲಿ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ನ್ಯಾಯಾಂಗತನಿಖೆ ನಡೆಸಬೇಕು ಎಂದು ಬಹುಜನ ಸಮಾಜ ಪಕ್ಷ (ಬಿಎಸ್ಪಿ) ಒತ್ತಾಯಿಸಿದೆ.
‘ಮ್ಯಾಜಿಸ್ಟೀರಿಯಲ್ ತನಿಖೆಯಿಂದ ಏಕಪಕ್ಷೀಯ ವರದಿ ಬರುವ ಸಾಧ್ಯತೆ ಇದೆ. ಹಿಂಸಾಚಾರದಲ್ಲಿ ಗುಂಡು ಹಾರಿಸುವ ಬದಲಿಗೆ ಗುಂಪು ಚದುರಿಸಲು ಪೊಲೀಸರು ಲಾಠಿ ಪ್ರಹಾರ, ಜಲಪಿರಂಗಿ, ರಬ್ಬರ್ ಬುಲೆಟ್, ಅಶ್ರುವಾಯು ಬಳಸಬಹುದಿತ್ತು. ಗುಂಡು ಹಾರಿಸಿದ್ದರಿಂದ ಮೂವರು ಮೃತಪಟ್ಟಿದ್ದು, ಅವರ ಕುಟುಂಬಕ್ಕೆ ₹50 ಲಕ್ಷ ಪರಿಹಾರ ನೀಡಬೇಕು’ ಎಂದು ಆಗ್ರಹಿಸಿ ಮುಖ್ಯಮಂತ್ರಿ ಅವರಿಗೆ ಬಿಎಸ್ಪಿ ರಾಜ್ಯ ಸಂಯೋಜಕ ಮಾರಸಂದ್ರ ಮುನಿಯಪ್ಪ ಪತ್ರ ಬರೆದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.