ADVERTISEMENT

ಆಯುಕ್ತ ವಿಶಾಲ್‌ ಬದಲಿಸಲು ಈಶ್ವರಪ್ಪ ಆಗ್ರಹ

​ಪ್ರಜಾವಾಣಿ ವಾರ್ತೆ
Published 21 ಮೇ 2020, 23:13 IST
Last Updated 21 ಮೇ 2020, 23:13 IST
ಈಶ್ವರಪ್ಪ
ಈಶ್ವರಪ್ಪ   

ಬೆಂಗಳೂರು: ತಮ್ಮ ವೇಗಕ್ಕೆ ಸ್ಪಂದಿಸದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಆಯುಕ್ತ ಡಾ.ವಿಶಾಲ್‌ ಅವರನ್ನು ಬದಲಿಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್ ಸಚಿವ ಕೆ.ಎಸ್‌.ಈಶ್ವರಪ್ಪ ಅವರು ಮುಖ್ಯಮಂತ್ರಿಯವರನ್ನು ಒತ್ತಾಯಿಸಿದರು.

ಬುಧವಾರ ಇಲಾಖೆ ಪ್ರಗತಿಪರಿಶೀಲನಾ ಸಭೆಯಲ್ಲಿ ಈಶ್ವರಪ್ಪ ಈ ವಿಷಯ ಪ್ರಸ್ತಾಪಿಸಿದರು ಎಂದು ಮೂಲಗಳು ತಿಳಿಸಿವೆ.

ಆಯುಕ್ತರು ರಾಜ್ಯದ ಯಾವುದೇ ಜಿಲ್ಲೆಗೂ ಭೇಟಿ ನೀಡಿಲ್ಲ. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಜವಾಬ್ದಾರಿ ಹೊತ್ತ ಅಧಿಕಾರಿಗಳು ಬೆಂಗಳೂರಿನಲ್ಲಿ ಕಚೇರಿಯಲ್ಲಿ ಕುಳಿತುಕೊಂಡಿದ್ದರೆ, ಪರಿಣಾಮಕಾರಿ ಕೆಲಸ ಮಾಡಲು ಸಾಧ್ಯವೇ ಎಂದು ಈಶ್ವರಪ್ಪ ಪ್ರಶ್ನಿಸಿದರು.

ADVERTISEMENT

ಅಧಿಕಾರಿಗಳು ಕಚೇರಿಯಲ್ಲಿ ಅಂಟಿಕೊಂಡು ಕೂರದೇ ರಾಜ್ಯ ವ್ಯಾಪಿ ಓಡಾಟ ನಡೆಸಿ ಕೆಲಸ ಮಾಡಬೇಕು. ಸಚಿವರ ವೇಗಕ್ಕೆ ತಕ್ಕಂತೆ ಕೆಲಸ ಮಾಡಬೇಕೆಂದು ಯಡಿಯೂರಪ್ಪ ತಾಕೀತು ಮಾಡಿದರು ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.