ಬೆಂಗಳೂರು: ಕೋವಿಡ್-19 ಸಾವಿನ ಪ್ರಮಾಣವನ್ನು ಶೇ 1 ಕ್ಕಿಂತ ಕಡಿಮೆ ಮಾಡಲು ಶ್ರಮವಹಿಸುವುದಾಗಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದರು.
ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಸೋಂಕು ತಗುಲಿದವರ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಿತ ವ್ಯಕ್ತಿಗಳನ್ನು ಮೊದಲ 48 ಗಂಟೆಗಳೊಳಗೆ ಪತ್ತೆ ಮಾಡಬೇಕು. ಅವರನ್ನು ಪರೀಕ್ಷೆ ಮಾಡಿ ಸರಿಯಾದ ಸಮಯದಲ್ಲಿ ಸೂಕ್ತ ಚಿಕಿತ್ಸೆ ನೀಡಿದರೆ ಸಾವಿನ ಪ್ರಮಾಣ ಇಳಿಸಬಹುದು’ ಎಂದು ಹೇಳಿದರು.
‘ಕೇರಳದಲ್ಲಿ ಉತ್ತಮ ಸಾರ್ವಜನಿಕ ಆರೋಗ್ಯ ಸೇವೆ ಇದೆ. ಕರ್ನಾಟಕದ ಆರೋಗ್ಯ ಸೇವೆಯೂ ಮಾದರಿಯಾಗಬೇಕು ಎಂಬ ಮಹತ್ವಾಕಾಂಕ್ಷೆ ಇಟ್ಟುಕೊಂಡಿದ್ದೇನೆ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.