ADVERTISEMENT

ನ್ಯಾ. ಶಿವರಾಜ್ ಪಾಟೀಲ್‌ಗೆ ಕಸಾಪ ದತ್ತಿ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 28 ಜನವರಿ 2022, 16:17 IST
Last Updated 28 ಜನವರಿ 2022, 16:17 IST
ಶಿವರಾಜ್ ಪಾಟೀಲ್‌
ಶಿವರಾಜ್ ಪಾಟೀಲ್‌   

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ನೀಡುವ ‘ಕೆಂಗಲ್ ಹನುಮಂತಯ್ಯ ದತ್ತಿ ಪ್ರಶಸ್ತಿ’ಗೆ ಸುಪ್ರೀಂಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಶಿವರಾಜ್ ಪಾಟೀಲ್‌ ಆಯ್ಕೆಯಾಗಿದ್ದಾರೆ.

ಪರಿಷತ್ತಿನ ಅಧ್ಯಕ್ಷ ಮಹೇಶ ಜೋಶಿ ನೇತೃತ್ವದಲ್ಲಿ ಈ ಆಯ್ಕೆ ನಡೆದಿದೆ. ಪ್ರಶಸ್ತಿಯು ₹ 25 ಸಾವಿರ ನಗದು ಒಳಗೊಂಡಿದೆ.

ರಾಯಚೂರಿನಮಲದಕಲ್‍ನಲ್ಲಿ ಜನಿಸಿದ ಶಿವರಾಜ್ ಪಾಟೀಲ್‌ಅವರು, ಕಲಬುರಗಿಯಲ್ಲಿ ಕಾನೂನು ಪದವಿ ಪಡೆದಿದ್ದರು. ಕರ್ನಾಟಕ ಮತ್ತು ತಮಿಳುನಾಡು ಹೈಕೋರ್ಟ್‌ಗಳ ನ್ಯಾಯಮೂರ್ತಿಗಳಾಗಿ,ರಾಜಸ್ಥಾನದ ಹೈಕೋರ್ಟ್‍ನ ಮುಖ್ಯ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿದ್ದಾರೆ.ನಂತರ ಸುಪ್ರೀಂಕೋರ್ಟ್‍ನ ನ್ಯಾಯಮೂರ್ತಿಯಾಗಿ ನೇಮಕಗೊಂಡು, ರಾಷ್ಟ್ರಮಟ್ಟದಲ್ಲಿ ಯಶಸ್ಸು ಗಳಿಸಿದರು. ಕರ್ನಾಟಕ ಲೋಕಾಯುಕ್ತರಾಗಿಯೂ ಸೇವೆ ಸಲ್ಲಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.