ಬೆಂಗಳೂರು: ನಟ ಪುನೀತ್ ರಾಜ್ಕುಮಾರ್ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕಂಬನಿ ಮಿಡಿದಿದ್ದಾರೆ.
'ಕನ್ನಡದ ಶ್ರೇಷ್ಠ ನಟ ಶ್ರೀ ಪುನೀತ್ ರಾಜ್ಕುಮಾರ್ ಇನ್ನಿಲ್ಲ ಎಂಬ ಸಂಗತಿಯನ್ನು ಅರಗಿಸಿಕೊಳ್ಳಲಾಗುತ್ತಿಲ್ಲ. ಬಾಲನಟನಾಗಿ ಮನಸೂರೆಗೊಂಡು ನಂತರದ ದಿನಗಳಲ್ಲಿ ನಾಯಕನಟನಾಗಿ ಮನೆಮಾತಾಗಿದ್ದ ಅವರು ಉತ್ತಮ ಗಾಯಕರೂ ಆಗಿದ್ದರು. ಅವರ ಕುಟುಂಬ ವರ್ಗಕ್ಕೆ ಮತ್ತು ಅಭಿಮಾನಿಗಳಿಗೆ ಸಾಂತ್ವನ ಕೋರುತ್ತೇನೆ. ಪವರ್ ಸ್ಟಾರ್ ಚಿತ್ರಪ್ರೇಮಿಗಳ ಹೃದಯದಲ್ಲಿ ಅಜರಾಮರ' ಎಂದು ಟ್ವೀಟ್ ಮಾಡಿದ್ದಾರೆ.
ಇಂದು (ಶುಕ್ರವಾರ ಅ.29ರಂದು) ಬೆಳಗ್ಗೆ ಜಿಮ್ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ನಂತರ ಅವರನ್ನು ರಮಣಶ್ರೀ ಕ್ಲಿನಿಕ್ಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಲಾಗಿತ್ತು. ಹೃದಯಾಘಾತಕ್ಕೆ ಒಳಗಾಗಿದ್ದ ಪುನೀತ್ರನ್ನು ತಕ್ಷಣವೇ ಬೆಂಗಳೂರಿನ ವಿಕ್ರಮ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪುನೀತ್ ಅವರಿಗೆ ತಜ್ಞ ವೈದ್ಯರ ತಂಡ ತೀವ್ರ ನಿಗಾ ಘಟಕದಲ್ಲಿ ತುರ್ತು ಚಿಕಿತ್ಸೆ ನೀಡಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೇ ಅವರು ನಿಧನರಾಗಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಇವನ್ನೂ ಓದಿ:
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.