ಬೆಂಗಳೂರು: ನಟ ಪುನೀತ್ ರಾಜ್ಕುಮಾರ್ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ.
'ಕನ್ನಡಿಗರ ಹೃದಯದಲ್ಲಿ ಚಿರಸ್ಥಾನ ಪಡೆದ ಅಭಿಮಾನಿಗಳ ಪ್ರೀತಿಯ ಅಪ್ಪು ಅಮರರಾಗಿಯೇ ಉಳಿಯಲಿದ್ದಾರೆ. ನಿಮ್ಮ ನೆನಪು ಚಿರಾಯು' ಎಂದು ಹೇಳಿದ್ದಾರೆ.
'ನಾಡಿನ ಜನಪ್ರಿಯ ಕಲಾವಿದ, ಡಾ.ರಾಜ್ ವಂಶದ ಕುಡಿ ಪುನೀತ್ ರಾಜಕುಮಾರ್ ಹಠಾತ್ ನಿಧನರಾದ ವಿಷಯ ದಿಗ್ಭ್ರಮೆ ಮೂಡಿಸಿದೆ. ಕಿರು ವಯಸ್ಸಿನಲ್ಲೇ ಅವರು ನಮ್ಮನ್ನು ಅಗಲಿದ್ದು ತೀವ್ರ ಆಘಾತ ತಂದಿದೆ. ಅವರ ಆತ್ಮಕ್ಕೆ ಸದ್ಗತಿ ಪ್ರಾರ್ಥಿಸುತ್ತಾ ಅವರ ಕುಟುಂಬ, ಅಪಾರ ಅಭಿಮಾನಿಗಳಿಗೆ ಆಘಾತವನ್ನು ಭರಿಸುವ ಶಕ್ತಿ ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ' ಎಂದು ಹೇಳಿದ್ದಾರೆ.
'ಅಣ್ಣಾವ್ರ ಜೊತೆ ಬಾಲ ಕಲಾವಿದರಾಗಿ ಭಕ್ತ ಪ್ರಹ್ಲಾದ, ಚಲಿಸುವ ಮೋಡಗಳು ಸೇರಿದಂತೆ ಹಲವು ಚಿತ್ರಗಳಲ್ಲಿ ಅವರ ಅಭಿನಯ, ಬೆಟ್ಟದ ಹೂವು, ನಟಸಾರ್ವಭೌಮ ಮೊದಲಾದ ಅನೇಕ ಯಶಸ್ವಿ ಚಿತ್ರಗಳ ಮೂಲಕ ಕನ್ನಡಿಗರ ಹೃದಯದಲ್ಲಿ ಚಿರಸ್ಥಾನ ಪಡೆದ ಅಭಿಮಾನಿಗಳ ಪ್ರೀತಿಯ ಅಪ್ಪು ಅಮರರಾಗಿಯೇ ಉಳಿಯಲಿದ್ದಾರೆ. ನಿಮ್ಮ ನೆನಪು ಚಿರಾಯು ಪುನೀತ್. ಓಂ ಶಾಂತಿ' ಎಂದು ಟ್ವೀಟ್ ಮಾಡಿದ್ದಾರೆ.
ಇವನ್ನೂ ಓದಿ:
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.