ಬೆಂಗಳೂರು: ಕೋವಿಡ್ ಎರಡನೇ ಅಲೆಯ ಲಾಕ್ಡೌನ್ನಿಂದ ಸಂಕಷ್ಟಕ್ಕೆ ತುತ್ತಾಗಿದ್ದ ಸಿನಿಮಾ ಮತ್ತು ಕಿರುತೆರೆಯ ಕಲಾವಿದರು ಮತ್ತು ತಂತ್ರಜ್ಞರಿಗೆ ರಾಜ್ಯ ಸರ್ಕಾರ ₹6.60 ಕೋಟಿ ಅನುದಾನ ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ.
ಇತ್ತೀಚೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸಿದ್ದ ಆರ್ಥಿಕ ಪ್ಯಾಕೇಜ್ನಲ್ಲಿ ಈ ಕ್ಷೇತ್ರದವರನ್ನೂ ಸೇರಿಸಲಾಗಿತ್ತು. ಸುಮಾರು 22 ಸಾವಿರ ಜನರಿಗೆ ತಲಾ ₹3,000 ಪರಿಹಾರ ಸಿಗಲಿದೆ. ಚಲನಚಿತ್ರ ಕ್ಷೇತ್ರದವರೂ ಸಂಕಷ್ಟದಲ್ಲಿದ್ದು ಅವರಿಗೂ ಪರಿಹಾರ ನೀಡಬೇಕು ಎಂದು ಹಲವು ನಟ–ನಟಿಯರು ಸರ್ಕಾರಕ್ಕೆ ಮನವಿ ಮಾಡಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.