ಬೆಂಗಳೂರು: ನಗರದ ಜ್ಞಾನ ಭಾರತಿಯ ಬಾಬಾ ಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ಅಧ್ಯಯನ ಕೇಂದ್ರದ ಆವರಣದಲ್ಲಿ ದಲಿತ ಕವಿ ಸಿದ್ಧಲಿಂಗಯ್ಯ ಅವರ ಅಂತಿಮ ದರ್ಶನ ಪಡೆಯಲು ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿದೆ.
ನೂರಾರು ಜನ ಸ್ಥಳದಲ್ಲಿದ್ದು, ಕೋವಿಡ್ ಮಾರ್ಗಸೂಚಿ ಪಾಲಿಸಲಾಗುತ್ತಿದೆ. ಬುದ್ಧನ ಪ್ರತಿಮೆ ಅಡಿ ಪಾರ್ಥಿವ ಶರೀರ ಇಡಲಾಗಿದೆ. ಸರದಿಯಲ್ಲಿ ಬಂದು ನಾಗರಿಕರು ಪುಷ್ಪನಮನ ಸಲ್ಲಿಸುತ್ತಿದ್ದಾರೆ.
ಚಲನಚಿತ್ರ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್, ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಕೆ.ಆರ್.ವೇಣುಗೋಪಾಲ, ಕುಲಸಚಿವರಾದ ಕೆ. ಜ್ಯೋತಿ, ಡಾ. ದೇವರಾಜ್, ಐಎಎಸ್ ಅಧಿಕಾರಿ ಕುಮಾರ ನಾಯ್ಕ್, ದಲಿತ ಮುಖಂಡ ಎಂ. ವೆಂಕಟಸ್ವಾಮಿ, ಪ್ರೊ. ಬಿ.ಕೆ.ರವಿ, ಪ್ರೊ. ಜಾಫೆಟ್ ಮತ್ತಿತರ ಗಣ್ಯರು ಇದ್ದಾರೆ.
ಸಿದ್ಧಲಿಂಗಯ್ಯನವರ ನಿವಾಸದಿಂದ ಪಾರ್ಥಿವ ಶರೀರವನ್ನು ಅಂಬೇಡ್ಕರ್ ಅಧ್ಯಯನ ಕೇಂದ್ರಕ್ಕೆ 10.50ಕ್ಕೆ ತರಲಾಯಿತು. ಒಂದು ತಾಸು ಇಲ್ಲಿ ಇಡಲಾಗುತ್ತದೆ. ನಂತರ ಕಲಾಗ್ರಾಮದಲ್ಲಿ ಬೌದ್ಧ ಧರ್ಮದ ವಿಧಿ ವಿಧಾನದಂತೆ ಅಂತ್ಯಕ್ರಿಯೆ ನಡೆಯಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.