ADVERTISEMENT

ಚಂದ್ರಕಾಂತ ಬೆಲ್ಲದಗೆ ಕಸಾಪ ದತ್ತಿ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 16 ಫೆಬ್ರುವರಿ 2021, 22:08 IST
Last Updated 16 ಫೆಬ್ರುವರಿ 2021, 22:08 IST
   

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ನೀಡುವ ‘ಕನ್ನಡ ಚಳವಳಿ ವೀರಸೇನಾನಿ ಮ. ರಾಮಮೂರ್ತಿ ದತ್ತಿ ಪ್ರಶಸ್ತಿ’ಗೆ ಕನ್ನಡಪರ ಹೋರಾಟಗಾರ ಚಂದ್ರಕಾಂತ ಬೆಲ್ಲದ ಆಯ್ಕೆಯಾಗಿದ್ದಾರೆ.

‘ಟಿ. ಗಿರಿಜಾ ಸಾಹಿತ್ಯ ಪ್ರಶಸ್ತಿ’ಗೆ ಡಾ.ಎಚ್.ಎಸ್. ಸುಜಾತಾ ಹಾಗೂ ‘ನಾಗಡಿಕೆರೆ–ಕಿಟ್ಟಪ್ಪಗೌಡ ರುಕ್ಮಿಣಿ ತೀರ್ಥಹಳ್ಳಿ ದತ್ತಿ ಪ್ರಶಸ್ತಿ’ಗೆ ವಿಶ್ವವಾಣಿಯ ಪ್ರಧಾನ ಸಂಪಾದಕ ವಿಶ್ವೇಶ್ವರ ಭಟ್ ಭಾಜನರಾಗಿದ್ದಾರೆ. ಪರಿಷತ್ತಿನ ಅಧ್ಯಕ್ಷ ಮನು ಬಳಿಗಾರ್ ನೇತೃತ್ವದಲ್ಲಿ ಈ ಆಯ್ಕೆಗಳು ನಡೆದಿವೆ. ಈ ಪ್ರಶಸ್ತಿಗಳು ಕ್ರಮವಾಗಿ ₹ 25 ಸಾವಿರ, ₹ 15 ಸಾವಿರ ಹಾಗೂ ₹ 10 ಸಾವಿರ ನಗದು ಬಹುಮಾನ, ಸ್ಮರಣಿಕೆ ಒಳಗೊಂಡಿದೆ ಎಂದು ಕಸಾಪ ಗೌರವ ಕಾರ್ಯದರ್ಶಿ ಕೆ. ರಾಜಕುಮಾರ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT