PHOTOS: ಕನ್ನಡ ಸಾಹಿತ್ಯ ಪರಿಷತ್ ಚುನಾವಣೆ: ಹಲವೆಡೆ ಬಿರುಸಿನ ಮತದಾನ
ಕನ್ನಡ ಸಾಹಿತ್ಯ ಪರಿಷತ್ತಿನ (ಕಸಾಪ) ರಾಜ್ಯಾಧ್ಯಕ್ಷ, ಜಿಲ್ಲಾ ಘಟಕಗಳ ಅಧ್ಯಕ್ಷ ಹಾಗೂ ಗಡಿನಾಡು ಘಟಕಗಳ ಅಧ್ಯಕ್ಷ ಸ್ಥಾನಕ್ಕೆ ಭಾನುವಾರ ಬೆಳಿಗ್ಗೆ 8 ಗಂಟೆಯಿಂದ ಮತದಾನ ಪ್ರಾರಂಭವಾಗಿದೆ. ಈ ಬಾರಿ 3 ಲಕ್ಷಕ್ಕೂ ಅಧಿಕ ಮಂದಿ ಮತ ಚಲಾಯಿಸಲು ಅರ್ಹರಾಗಿದ್ದಾರೆ. ಮತದಾನ ಮಾಡಿದವರ ಎಡಗೈ ಮಧ್ಯದ ಬೆರಳಿಗೆ ಶಾಹಿ ಹಾಕಲಾಗುತ್ತಿದೆ. ಸಂಜೆ 4 ಗಂಟೆಯವರೆಗೆ ಮತದಾನಕ್ಕೆ ಅವಕಾಶ ಇದೆ. ಬೆಂಗಳೂರು ನಗರ, ಹಾವೇರಿ, ಬೆಳಗಾವಿ ಜಿಲ್ಲೆಗಳಲ್ಲಿ ಮತದಾನ ಬಿರುಸು ಪಡೆದುಕೊಂಡಿದೆ.
ಪ್ರಜಾವಾಣಿ ವಾರ್ತೆ
Published 21 ನವೆಂಬರ್ 2021, 7:07 IST
Last Updated 21 ನವೆಂಬರ್ 2021, 7:07 IST
ಬೆಂಗಳೂರಿನ ಗೋವಿಂದರಾಜನಗರ ಸರ್ಕಾರಿ ಹೋಮಿಯೋಪತಿ ಕಾಲೇಜು ಮುಂದೆ ಅಭ್ಯರ್ಥಿ ಎಂ ತಿಮ್ಮಯ್ಯ ಅವರು ಮತಯಾಚಿಸುವ ದೃಶ್ಯ
ಬೆಳಗಾವಿ ಜಿಲ್ಲೆಯ ಮೂಡಲಗಿ ತಹಶೀಲ್ದಾರ್ ಕಚೇರಿಯಲ್ಲಿ ಕಸಾಪ ಚುನಾವಣೆ ಮತದಾನ ಪ್ರಕ್ರಿಯೆ ಆರಂಭವಾಗಿದೆ.
ಕನ್ನಡ ಸಾಹಿತ್ಯ ಪರಿಷತ್ ಚುನಾವಣೆಯ ಹಾವೇರಿ ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನಕ್ಕಾಗಿ ಭಾನುವಾರ ಮತದಾನ ಬಿರುಸಿನಿಂದ ನಡೆಯುತ್ತಿದೆ
ರಾಜ್ಯ ಅಧ್ಯಕ್ಷ ಸ್ಥಾನದ ಅಭ್ಯರ್ಥಿ ಶಂಕರ್ ಗೌಡ ಮಾಲಿ ಪಾಟೀಲ್ರವರು ಮತ ಚಲಾಯಿಸಿದರು
ಬೆಂಗಳೂರು ನಗರದ ಸುಮ್ಮನಹಳ್ಳಿ ಬಳಿ ಶ್ರೀಗಂಧ ಕಾವಲು ಹೈಸ್ಕೂಲ್ ನಲ್ಲಿ ಸಾಹಿತಿ ಗೊ. ರು. ಚನ್ನಬಸಪ್ಪ ಮತ ಚಲಾಯಿಸಿದರು
ಕಸಾಪ ಹಾವೇರಿ ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನದ ಅಭ್ಯರ್ಥಿ ಲಿಂಗಯ್ಯ ಹಿರೇಮಠ ಅವರು ಬ್ಯಾಡಗಿ ಮತಗಟ್ಟೆಯಲ್ಲಿ ಮತದಾನ ಮಾಡಿದರು
ವಿರಕ್ತಮಠದ ಬಸವಪ್ರಭು ಸ್ವಾಮೀಜಿ ಸಹಿತ ಹಲವು ಗಣ್ಯರು ಮತ ಚಲಾಯಿಸಿದರು.