ADVERTISEMENT

ಕನ್ನಡ ಸಾಹಿತ್ಯ ಸಮ್ಮೇಳನ ಮುಂದೂಡಿಕೆ: ಜ. 6, 7, 8ಕ್ಕೆ ಹಾವೇರಿಯಲ್ಲಿ ಸಮ್ಮೇಳನ

ಅಗತ್ಯವಾದ ಸಿದ್ಧತೆ ಆಗದ ಕಾರಣ ಇದೀಗ ಸಮ್ಮೇಳನವನ್ನು ಮುಂದೂಡಿಕೆ

​ಪ್ರಜಾವಾಣಿ ವಾರ್ತೆ
Published 12 ಅಕ್ಟೋಬರ್ 2022, 12:20 IST
Last Updated 12 ಅಕ್ಟೋಬರ್ 2022, 12:20 IST
   

ಬೆಂಗಳೂರು: 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಹಾವೇರಿಯಲ್ಲಿ ಜನವರಿ 6, 7 ಮತ್ತು 8ರಂದು ನಡೆಯಲಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜೊತೆ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್‌ಕುಮಾರ್‌ ಚರ್ಚಿಸಿದ ಬಳಿಕ ದಿನಾಂಕ ನಿಗದಿಪಡಿಸಲಾಗಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.

ಈ ಹಿಂದೆ ನ. 11, 12 ಮತ್ತು 13ರಂದು ಸಮ್ಮೇಳನ ನಡೆಸಲು ನಿರ್ಧರಿಸಲಾಗಿತ್ತು. ಆದರೆ, ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ಮತ್ತು ಸಮ್ಮೇಳನಕ್ಕೆ ಅಗತ್ಯವಾದ ಸಿದ್ಧತೆ ಆಗದ ಕಾರಣ ಇದೀಗ ಸಮ್ಮೇಳನವನ್ನು ಮುಂದೂಡಿಕೆ ಮಾಡಲಾಗಿದೆ.

ADVERTISEMENT

ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಜುಲೈನಲ್ಲಿ ನಡೆಸಿದ್ದ ಪೂರ್ವಭಾವಿ ಸಭೆಯಲ್ಲಿ ಸೆ. 23, 24, 25ರಂದು ಸಮ್ಮೇಳನ ನಡೆಸಲು ತೀರ್ಮಾನಿಸಲಾಗಿತ್ತು. ಈ ದಿನಗಳಲ್ಲಿ ಪಿತೃಪಕ್ಷ ಎಂಬ ಕಾರಣಕ್ಕೆ ನ. 11, 12 ಮತ್ತು 13ರಂದು ಸಮ್ಮೇಳನ ನಡೆಸಲು ದಿನಾಂಕ ಮರು ನಿಗದಿಪಡಿಸಿ ಮುಖ್ಯಮಂತ್ರಿ ಪ್ರಕಟಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.