ಮೂಡುಬಿದಿರೆ: ಕಾಂತಾವರ ಕನ್ನಡ ಸಂಘವು 2020 ನೇ ಸಾಲಿನ ವಾರ್ಷಿಕ ದತ್ತಿನಿಧಿ ಪ್ರಶಸ್ತಿಗಳನ್ನು ಪ್ರಕಟಿಸಿದೆ.
ಮೊಗಸಾಲೆ ಪ್ರತಿಷ್ಠಾನ ನೀಡುವ ‘ಕಾಂತಾವರ ಲಲಿತಕಲಾ ಪ್ರಶಸ್ತಿ’ಗೆ ಹಿರಿಯ ಸಾಹಿತಿ ಉದ್ಯಾವರ ಮಾಧವ ಆಚಾರ್ಯ ಮತ್ತು ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕಿ ಕಾಂತಾವರ ಸರೋಜಿನಿ ನಾಗಪ್ಪಯ್ಯ ಈಶ್ವರಮಂಗಲ ಅವರ ದತ್ತಿನಿಧಿಯಡಿ ನೀಡುವ 'ಕಾಂತಾವರ ಸಾಹಿತ್ಯ ಪ್ರಶಸ್ತಿ'ಗೆ ಚಿಂತಕ ಟಿ.ಎನ್. ಖಂಡಿಗೆ ಆಯ್ಕೆಯಾಗಿದ್ದಾರೆ. ಪ್ರಶಸ್ತಿಗಳು ತಲಾ ₹ 10 ಸಾವಿರ ನಗದು, ತಾಮ್ರಪತ್ರವನ್ನು ಒಳಗೊಂಡಿವೆ ಎಂದು ಸಂಘದ ಕಾರ್ಯಾಧ್ಯಕ್ಷ ನಿರಂಜನ ಮೊಗಸಾಲೆ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.