ಬೆಂಗಳೂರು: ‘ಕಮ್ಯುನಿಸ್ಟ್ ಸಿದ್ಧಾಂತ ಪ್ರತಿಪಾದಿಸಿದ್ದ ಕಾರ್ಲ್ಮಾರ್ಕ್ಸ್ ಮನುಷ್ಯ ಆಸ್ತಿ ಹೊಂದಬಾರದು, ಯಾವುದೇ ಧರ್ಮ ಅನುಸರಿಸ
ಬಾರದು ಎಂದು ಹೇಳಿದ್ದ. ಎಲ್ಲ ಮಹಿಳೆಯರು ಎಲ್ಲರಿಗೂ ದೊರೆಯುವಂತಾಗಬೇಕು ಮತ್ತು ಅವರೆಲ್ಲರೂ ವೇಶ್ಯೆಯರಾಗಬೇಕು ಎಂದೂ ಪ್ರತಿಪಾದಿಸಿದ್ದ. ಇಂತಹ ತತ್ವಗಳ ಆಧಾರದಲ್ಲೇ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯ (ಜೆಎನ್ಯು) ಕಾರ್ಯನಿರ್ವಹಿಸುತ್ತಿದೆ’ ಎಂದು ಚೆನ್ನೈನ ಆರ್ಥಿಕ ತಜ್ಞ ಎಸ್. ಗುರುಮೂರ್ತಿ ಹೇಳಿದರು.
ನಗರದಲ್ಲಿ ಶನಿವಾರ ಆರ್ಎಸ್ಎಸ್ ನಾಯಕ ದತ್ತೋಪಂತ್ ಠೇಂಗಡಿ ಜನ್ಮಶತಾಬ್ದಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಇಂತಹ ತತ್ವಗಳನ್ನು ಪ್ರತಿಪಾದಿಸುವ ಸಿದ್ಧಾಂತವನ್ನು ನಂಬುವುದು ಹೇಗೆ. ಆದರೆ ಬುದ್ಧಿಜೀವಿಗಳು, ಪ್ರಗತಿಪರರು, ರಾಜಕಾರಣಿಗಳು ಎನಿಸಿಕೊಂಡವರು ಇಂತಹ ಸಿದ್ಧಾಂತವನ್ನು ಪ್ರಚಾರ ಮಾಡುತ್ತಾರೆ, ಹೊಗಳುತ್ತಾರೆ’ ಎಂದು ಅವರು ದೂರಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.