ADVERTISEMENT

Live| ಉಪಚುನಾವಣೆ ಫಲಿತಾಂಶ: ಶ್ರೀನಿವಾಸ ಮಾನೆ ಕೈ ಹಿಡಿದ ಹಾನಗಲ್‌ ಜನ, ಭೂಸನೂರಗೆ ಸಿಂದಗಿಯಲ್ಲಿ ಭರ್ಜರಿ ಜಯ

ಸಿಂದಗಿ ಹಾಗೂ ಹಾನಗಲ್‌ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಇಂದು ಬೆಳಿಗ್ಗೆ 8 ಗಂಟೆಗೆ ಆರಂಭಗೊಂಡು ಮಧ್ಯಾಹ್ನದ ಹೊತ್ತಿಗೆ ಫಲಿತಾಂಶ ಹೊರಬಂತು. ವಿಜಯಪುರ ನಗರದ ಸೈನಿಕ ಶಾಲೆಯ ‘ಒಡೆಯರ ಹೌಸ್’ನಲ್ಲಿ ಸಿಂದಗಿ ಕ್ಷೇತ್ರದ ಮತ ಎಣಿಕೆ ನಡೆಯಿತು. ಒಟ್ಟು 22 ಸುತ್ತು ಮತ ಎಣಿಕೆಯ ಪೈಕಿ ಎಲ್ಲ ಸುತ್ತುಗಳಲ್ಲೂ ಬಿಜೆಪಿ ಅಭ್ಯರ್ಥಿ ಮುನ್ನಡೆ ಕಾಯ್ದುಕೊಂಡು, ಅಂತಿಮವಾಗಿ ರಮೇಶ ಭೂಸನೂರ 31,088 ಮತಗಳ ಅಂತರದ ಗೆಲುವು ಸಾಧಿಸಿದರು. ಹಾವೇರಿ ನಗರದ ಸರ್ಕಾರಿ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ಹಾನಗಲ್‌ ಕ್ಷೇತ್ರದ ಮತ ಎಣಿಕೆ ನಡೆಸಲಾಯಿತು. ಕಾಂಗ್ರೆಸ್‌ ಶ್ರೀನಿವಾಸ ಮಾನೆ ಗೆಲುವು ಸಾಧಿಸಿದ್ದಾರೆ.

​ಪ್ರಜಾವಾಣಿ ವಾರ್ತೆ
Published 2 ನವೆಂಬರ್ 2021, 10:17 IST
Last Updated 2 ನವೆಂಬರ್ 2021, 10:17 IST

ರಾಜ್ಯದ ಎರಡು ಕ್ಷೇತ್ರಗಳ ಉಪಚುನಾವಣೆಗಳಲ್ಲಿ ಬಿಜೆಪಿಗೆ ಮಿಶ್ರ ಫಲಿತಾಂಶ ಲಭಿಸಿದೆ. ಜನಾದೇಶವನ್ನು ಸ್ವೀಕಾರ ಮಾಡುತ್ತೇವೆ: ಬಿಜೆಪಿ ರಾಷ್ಟ್ರೀಯ ಪ್ರದಾನ ಕಾರ್ಯದರ್ಶಿ ಸಿ.ಟಿ. ರವಿ ಪ್ರತಿಕ್ರಿಯೆ

ಹಾನಗಲ್‌ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಹಿನ್ನಡೆಯ ನಿರೀಕ್ಷೆ ಇರಲಿಲ್ಲ. ಈ ಬಗ್ಗೆ ಎಲ್ಲ ನಾಯಕರೂ ಕುಳಿತು ಆತ್ಮಾವಲೋಕನ ಮಾಡಿಕೊಳ್ಳುತ್ತೇವೆ: ಬಿ.ಎಸ್‌.ಯಡಿಯೂರಪ್ಪ

ಜೆಡಿಎಸ್‌ ಪಕ್ಷವು ಬಿಜೆಪಿಯ ‘ಬಿ ಟೀಮ್‌’ ಎಂದು ಕಾಂಗ್ರೆಸ್‌ ನಾಯಕರು ನಡೆಸಿದ ದುರುದ್ದೇಶಪೂರಿತ ಅಪಪ್ರಚಾರಕ್ಕೆ ಉಪ ಚುನಾವಣೆ ಫಲಿತಾಂಶವೇ ಉತ್ತರ: ಎಚ್.‌ಡಿ.ಕುಮಾರಸ್ವಾಮಿ 

ಹಾನಗಲ್ ಉಪಚುನಾವಣೆ ಮತ ಎಣಿಕೆ ಪೂರ್ಣ: ಕಾಂಗ್ರೆಸ್‌ಗೆ ಗೆಲುವು

ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಅವರು 7,598 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

'ಸಿಎಂ ತವರು ಜಿಲ್ಲೆಯ' ಹಾನಗಲ್ ಕ್ಷೇತ್ರದಲ್ಲಿ ಗೆದ್ದೇ ತೀರುತ್ತೇವೆ ಎಂದು ಬೀಗುತ್ತಿದ್ದ ಬಿಜೆಪಿಗೆ ಭಾರಿ ಮುಖಭಂಗವಾಗಿದೆ.

"ಆಪತ್ಬಾಂಧವ" ಎಂಬ ಬಿರುದಿಗೆ ಪಾತ್ರರಾಗಿದ್ದ ಶ್ರೀನಿವಾಸ ಮಾನೆ ಅವರ ಗೆಲುವಿಗೆ ಕೋವಿಡ್ ಕಾಲದಲ್ಲಿ ಜನರಿಗೆ ಸ್ಪಂದನೆ ಹಾಗೂ ಕಾಂಗ್ರೆಸ್ ಸರ್ಕಾರದ 'ಭಾಗ್ಯಗಳ ಯೋಜನೆ' ಸಹಕಾರಿಯಾಗಿವೆ ಎನ್ನಲಾಗುತ್ತಿದೆ.

ADVERTISEMENT

ಹಾನಗಲ್ ಉಪಚುನಾವಣೆ: ಶ್ರೀನಿವಾಸ ಮಾನೆಗೆ 7,598 ಮತಗಳ ಮುನ್ನಡೆ

ಹಾನಗಲ್ ಉಪಚುನಾವಣೆ: ಇದುವರೆಗಿನ ಒಟ್ಟು ಫಲಿತಾಂಶ (19 ಸುತ್ತು ಸೇರಿ)

ಬಿಜೆಪಿ- ಶಿವರಾಜ ಸಜ್ಜನರ- 79,515

ಕಾಂಗ್ರೆಸ್- ಶ್ರೀನಿವಾಸ ಮಾನೆ- 87,113

ಜೆಡಿಎಸ್- ನಿಯಾಜ್ ಶೇಖ್- 921

ಕಾಂಗ್ರೆಸ್‌ಗೆ 7,598 ಮತಗಳ ಮುನ್ನಡೆ

ಹಾನಗಲ್‌ ಉಪಚುನಾವಣೆ: ಗೆಲುವಿನ ಹಾದಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ

ಹಾನಗಲ್‌ ಕ್ಷೇತ್ರ: ಕಡೆಯ ಒಂದು ಸುತ್ತು (19ನೇ) ಬಾಕಿ ಇದ್ದು, ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಅವರ ಗೆಲುವು ಬಹುತೇಕ ಖಚಿತವಾಗಿದೆ. ಹಾವೇರಿ ನಗರ ಮತ್ತು ಹಾನಗಲ್ ಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮ, ಹರ್ಷೋದ್ಗಾರ, ಜೈಕಾರ ಮೊಳಗುತ್ತಿದೆ.

ಅಭ್ಯರ್ಥಿ ಬಗ್ಗೆ ಅಪಸ್ವರವಿತ್ತೋ ಗೊತ್ತಿಲ್ಲ: ಮುನೇನಕೊಪ್ಪ

ಹುಬ್ಬಳ್ಳಿ: ಹಾನಗಲ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶಿವರಾಜ ಸಜ್ಜನ ದುರ್ಬಲರಾಗಿದ್ದರೋ ಅಥವಾ ಅವರ ಬಗ್ಗೆ ಕ್ಷೇತ್ರದಲ್ಲಿ ಅಪಸ್ವರವಿತ್ತೋ ಗೊತ್ತಿಲ್ಲ. ಆದರೆ, ಮತದಾರರ ನಿರ್ಣಯಕ್ಕೆ ತಲೆ ಬಾಗುತ್ತೇವೆ ಎಂದು ಸಚಿವ ಶಂಕರಪಾಟೀಲ ಮುನೇನಕೊಪ್ಪ ಹೇಳಿದರು.

ಹಾನಗಲ್ ಉಪಚುನಾವಣೆ: ಕಾಂಗ್ರೆಸ್‌ ಗೆಲವು ಖಚಿತ

ಹಾನಗಲ್ ಉಪಚುನಾವಣೆ: ಇದುವರೆಗಿನ ಒಟ್ಟು ಫಲಿತಾಂಶ (18 ಸುತ್ತು ಸೇರಿ)

ಬಿಜೆಪಿ- ಶಿವರಾಜ ಸಜ್ಜನರ- 75,999

ಕಾಂಗ್ರೆಸ್- ಶ್ರೀನಿವಾಸ ಮಾನೆ- 83,324

ಜೆಡಿಎಸ್- ನಿಯಾಜ್ ಶೇಖ್- 866

ಕಾಂಗ್ರೆಸ್‌ಗೆ  7,325 ಮತಗಳ ಮುನ್ನಡೆ

ಹಾನಗಲ್ ಉಪಚುನಾವಣೆ: 16ನೇ ಸುತ್ತಿನ ಎಣಿಕೆಯಲ್ಲಿ ಕಾಂಗ್ರೆಸ್‌ 6,828 ಮತಗಳ ಮುನ್ನಡೆ

ಹಾನಗಲ್ ಉಪಚುನಾವಣೆ: 16ನೇ ಸುತ್ತಿನ ಮತ ಎಣಿಕೆ

6828 ಮತಗಳಿಂದ ಕಾಂಗ್ರೆಸ್ ಮುನ್ನಡೆ

ಬಿಜೆಪಿ: 66,622

ಕಾಂಗ್ರೆಸ್: 73,450

ಜೆಡಿಎಸ್: 767

ಸಿಂದಗಿ ಉಪಚುನಾವಣೆ: ಕೊನೆವರೆಗೂ ಎಲ್ಲ ಸುತ್ತುಗಳಲ್ಲೂ ಬಿಜೆಪಿ ಮುನ್ನಡೆ


ಸಿಂದಗಿ ವಿಧಾನಸಭಾ ಉಪ ಚುನಾವಣೆ 22ನೇ ಸುತ್ತಿನ ಮತ ಎಣಿಕೆ ಪೂರ್ಣಗೊಂಡಿದ್ದು, ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಗೆಲುವು ಸಾಧಿಸಿದ್ದಾರೆ.

ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಅವರು ಕಾಂಗ್ರೆಸ್ ಅಭ್ಯರ್ಥಿ ಅಶೋಕ ಮನಗೂಳಿ ಅವರಿಗಿಂತ 31,088 ಮತಗಳಿಂದ ಜಯ ಗಳಿಸಿದ್ದಾರೆ.
 
ಅಭ್ಯರ್ಥಿಗಳು ಪಡೆದ ಮತಗಳ ವಿವರ (22 ಸುತ್ತು ಸೇರಿ)

*ಅಶೋಕ ಮನಗೂಳಿ (ಕಾಂಗ್ರೆಸ್): 62,292

*ರಮೇಶ ಭೂಸನೂರ (ಬಿಜೆಪಿ): 93,380

*ನಾಜಿಯಾ ಅಂಗಡಿ (ಜೆಡಿಎಸ್): 4321

ಸಿಂದಗಿಯಲ್ಲಿ ಬಿಜೆಪಿಯ ರಮೇಶ ಭೂಸನೂರಗೆ 31,088 ಮತಗಳ ಅಂತರದ ಗೆಲುವು

ವಿಜಯಪುರ: ಸಿಂದಗಿ ವಿಧಾನಸಭೆ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ 31,088 ಮತಗಳ ಅಂತರದಿಂದ ಭರ್ಜರಿ ಗೆಲುವು ದಾಖಲಿಸಿದ್ದಾರೆ. ರಮೇಶ ಭೂಸನೂರ ಅವರು 93,380 ಮತಗಳನ್ನು ಪಡೆದುಕೊಂಡಿದ್ದಾರೆ.

ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ಅಶೋಕ ಮನಗೂಳಿ ಅವರು 62,292 ಮತಗಳನ್ನು ಪಡೆದುಕೊಂಡಿದ್ದಾರೆ.

ಜೆಡಿಎಸ್ ಅಭ್ಯರ್ಥಿ ನಾಜಿಯಾ ಅಂಗಡಿ 4321 ಮತಗಳನ್ನು ಪಡೆಯಲಷ್ಟೇ ಶಕ್ತವಾಗಿದ್ದಾರೆ. ಜೆಡಿಎಸ್ ಅಭ್ಯರ್ಥಿ ಸೇರಿದಂತೆ ಕಣದಲ್ಲಿದ್ದ ಇತರೆ ನಾಲ್ವರು ಅಭ್ಯರ್ಥಿಗಳು ಠೇವಣಿ ಕಳೆದುಕೊಂಡಿದ್ದಾರೆ.

ಸಿಂದಗಿ ಚುನಾವಣಾ ಉಸ್ತುವಾರಿ ವಹಿಸಿಕೊಂಡಿದ್ದ ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಕ್ಷೇತ್ರದಲ್ಲಿ ಜಾತಿ ಸಮೀಕರಣ ಮಾಡುವ ಮೂಲಕ ಬಿಜೆಪಿಗೆ ಜಯ ತಂದುಕೊಡುವಲ್ಲಿ ಯಶಸ್ವಿಯಾಗಿದ್ದಾರೆ.

ಗೆದ್ದ ಜನಬಲ, ಸೋತ ಹಣಬಲ: ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ

ಹಾನಗಲ್ | ಗೆದ್ದ ಜನಬಲ, ಸೋತ ಹಣಬಲ: ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ

ಹಾನಗಲ್ ಕ್ಷೇತ್ರದಲ್ಲಿ ಜನಬಲ ಗೆದ್ದಿದೆ. ಹಣ ಬಲ ಸೋತಿದೆ. ಹಾನಗಲ್ ಜನರಿಗೆ ಸಾಷ್ಟಾಂಗ ನಮಸ್ಕಾರ ಸಲ್ಲಿಸುವೆ. ನಮ್ಮ ನಾಯಕರು ಪರಿಶ್ರಮ ಹಾಕಿದ್ದಾರೆ. ಸರ್ಕಾರದ ತಂತ್ರ ಮಣಿಸಿದ್ದಾರೆ. ಜನರು ಸರ್ಕಾರದ ಜನವಿರೋಧಿ ನೀತಿ. ದುರಾಡಳಿತ ತಿರಸ್ಕಾರ ಮಾಡಿದ್ದಾರೆ. ಇನ್ನಾದ್ರು ಜನರ ಕಲ್ಯಾಣ ಮಾಡಲಿ. ಆಡಳಿತ ಯಂತ್ರ ಸಂಪೂರ್ಣ ಹದಗೆಟ್ಟಿದೆ ಎಂದು ಹೇಳಿದರು.

ಸಿಂದಗಿ ಅಭ್ಯರ್ಥಿಗೆ ಬಿಎಸ್‌ವೈ ಅಭಿನಂದನೆ

ಹಾನಗಲ್ ಉಪಚುನಾವಣೆ: 14ನೇ ಸುತ್ತಿನಲ್ಲಿ ಬಿಜೆಪಿಗೆ 256 ಮತಗಳ ಮುನ್ನಡೆ

ಹಾನಗಲ್ ಉಪಚುನಾವಣೆ: 14ನೇ ಸುತ್ತಿನ ಫಲಿತಾಂಶ

ಬಿಜೆಪಿ- ಶಿವರಾಜ ಸಜ್ಜನರ- 4760

ಕಾಂಗ್ರೆಸ್- ಶ್ರೀನಿವಾಸ ಮಾನೆ- 4504

ಜೆಡಿಎಸ್- ನಿಯಾಜ್ ಶೇಖ್- 63

ಬಿಜೆಪಿಗೆ 256 ಮತಗಳ ಮುನ್ನಡೆ

ಹಾನಗಲ್ ಉಪಚುನಾವಣೆ: ಇದುವರೆಗಿನ ಒಟ್ಟು ಫಲಿತಾಂಶ (13 ಸುತ್ತು ಸೇರಿ)

ಹಾನಗಲ್ ಉಪಚುನಾವಣೆ: ಕಾಂಗ್ರೆಸ್‌ಗೆ  7,063 ಮತಗಳ ಮುನ್ನಡೆ

ಬಿಜೆಪಿ- ಶಿವರಾಜ ಸಜ್ಜನರ- 52,922

ಕಾಂಗ್ರೆಸ್- ಶ್ರೀನಿವಾಸ ಮಾನೆ- 59,985

ಜೆಡಿಎಸ್- ನಿಯಾಜ್ ಶೇಖ್- 620

ಪಕ್ಷೇತರ- ನಜೀರ್ ಅಹಮದ್ ಸವಣೂರ- 583

ಕಾಂಗ್ರೆಸ್‌ಗೆ  7,063 ಮತಗಳ ಮುನ್ನಡೆ

ಹಾನಗಲ್ ಉಪಚುನಾವಣೆ: 12ನೇ ಸುತ್ತಿನಲ್ಲಿ ಕಾಂಗ್ರೆಸ್‌ಗೆ 359 ಮತಗಳ ಮುನ್ನಡೆ

ಹಾನಗಲ್ ಉಪಚುನಾವಣೆ: 12ನೇ ಸುತ್ತಿನ ಫಲಿತಾಂಶ

ಬಿಜೆಪಿ- ಶಿವರಾಜ ಸಜ್ಜನರ- 4,669

ಕಾಂಗ್ರೆಸ್- ಶ್ರೀನಿವಾಸ ಮಾನೆ- 5,028

ಜೆಡಿಎಸ್- ನಿಯಾಜ್ ಶೇಖ್- 47

ಕಾಂಗ್ರೆಸ್‌ಗೆ 359 ಮತಗಳ ಮುನ್ನಡೆ

ಸಿಂದಗಿ ಉಪಚುನಾವಣೆ: ಬಿಜೆಪಿ ಅಭ್ಯರ್ಥಿ 30,846 ಮತಗಳ ಮುನ್ನಡೆ

ಸಿಂದಗಿ ವಿಧಾನಸಭಾ ಉಪ ಚುನಾವಣೆ 21ನೇ ಸುತ್ತಿನ ಮತ ಎಣಿಕೆ ಪೂರ್ಣಗೊಂಡಿದೆ.

ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಅವರು ಕಾಂಗ್ರೆಸ್ ಅಭ್ಯರ್ಥಿ ಅಶೋಕ ಮನಗೂಳಿ ಅವರಿಗಿಂತ 30,846 ಮತಗಳ ಮುನ್ನಡೆ ಸಾಧಿಸಿದ್ದಾರೆ.
 
ಅಭ್ಯರ್ಥಿಗಳು ಪಡೆದ ಮತಗಳ ವಿವರ (21 ಸುತ್ತು ಸೇರಿ)

*ಅಶೋಕ ಮನಗೂಳಿ (ಕಾಂಗ್ರೆಸ್): 61,735

*ರಮೇಶ ಭೂಸನೂರ (ಬಿಜೆಪಿ): 92,581

*ನಾಜಿಯಾ ಅಂಗಡಿ (ಜೆಡಿಎಸ್): 4,248

ಸಿಂದಗಿ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗೆ 88,744 ಮತಗಳು

ಸಿಂದಗಿ ವಿಧಾನಸಭಾ ಉಪ ಚುನಾವಣೆ 20ನೇ ಸುತ್ತಿನ ಮತ ಎಣಿಕೆ ಪೂರ್ಣಗೊಂಡಿದೆ.

ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಅವರು ಕಾಂಗ್ರೆಸ್ ಅಭ್ಯರ್ಥಿ ಅಶೋಕ ಮನಗೂಳಿ ಅವರಿಗಿಂತ 29,560 ಮತಗಳ ಮುನ್ನಡೆ ಸಾಧಿಸಿದ್ದಾರೆ.
 
ಅಭ್ಯರ್ಥಿಗಳು ಪಡೆದ ಮತಗಳ ವಿವರ (20 ಸುತ್ತು ಸೇರಿ)

*ಅಶೋಕ ಮನಗೂಳಿ (ಕಾಂಗ್ರೆಸ್): 59,184

*ರಮೇಶ ಭೂಸನೂರ (ಬಿಜೆಪಿ): 88,744

*ನಾಜಿಯಾ ಅಂಗಡಿ (ಜೆಡಿಎಸ್): 4,028

ಹಾನಗಲ್ ಉಪಚುನಾವಣೆ: ಕಾಂಗ್ರೆಸ್‌ಗೆ 6,459 ಮತಗಳ ಮುನ್ನಡೆ

ಹಾನಗಲ್ ಉಪಚುನಾವಣೆ: ಇದುವರೆಗಿನ ಒಟ್ಟು ಫಲಿತಾಂಶ (11 ಸುತ್ತು ಸೇರಿ)

ಬಿಜೆಪಿ- ಶಿವರಾಜ ಸಜ್ಜನರ- 44,178

ಕಾಂಗ್ರೆಸ್- ಶ್ರೀನಿವಾಸ ಮಾನೆ- 50,637

ಜೆಡಿಎಸ್- ನಿಯಾಜ್ ಶೇಖ್- 523

ಪಕ್ಷೇತರ- ನಜೀರ್ ಅಹಮದ್ ಸವಣೂರ- 570

ಕಾಂಗ್ರೆಸ್‌ಗೆ 6,459 ಮತಗಳ ಮುನ್ನಡೆ

ಸಿಂದಗಿ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗೆ 80,020 ಮತಗಳು

ಸಿಂದಗಿ ವಿಧಾನಸಭಾ ಉಪ ಚುನಾವಣೆ 18ನೇ ಸುತ್ತಿನ ಮತ ಎಣಿಕೆ ಪೂರ್ಣಗೊಂಡಿದೆ.

ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಅವರು ಕಾಂಗ್ರೆಸ್ ಅಭ್ಯರ್ಥಿ ಅಶೋಕ ಮನಗೂಳಿ ಅವರಿಗಿಂತ 27,383 ಮತಗಳ ಮುನ್ನಡೆ ಸಾಧಿಸಿದ್ದಾರೆ.
 
ಅಭ್ಯರ್ಥಿಗಳು ಪಡೆದ ಮತಗಳ ವಿವರ (18 ಸುತ್ತು ಸೇರಿ)

*ಅಶೋಕ ಮನಗೂಳಿ (ಕಾಂಗ್ರೆಸ್): 52,637

*ರಮೇಶ ಭೂಸನೂರ (ಬಿಜೆಪಿ): 80,020

*ನಾಜಿಯಾ ಅಂಗಡಿ (ಜೆಡಿಎಸ್): 3,428

ಹಾನಗಲ್ ಉಪಚುನಾವಣೆ: ಕಾಂಗ್ರೆಸ್‌ಗೆ 4,842 ಮತಗಳ ಮುನ್ನಡೆ

ಹಾನಗಲ್ ಉಪಚುನಾವಣೆ: ಇದುವರೆಗಿನ ಒಟ್ಟು ಫಲಿತಾಂಶ (10 ಸುತ್ತು ಸೇರಿ)

ಬಿಜೆಪಿ- ಶಿವರಾಜ ಸಜ್ಜನರ- 40,671

ಕಾಂಗ್ರೆಸ್- ಶ್ರೀನಿವಾಸ ಮಾನೆ- 45,513

ಜೆಡಿಎಸ್- ನಿಯಾಜ್ ಶೇಖ್- 466

ಕಾಂಗ್ರೆಸ್‌ಗೆ  4,842 ಮತಗಳ ಮುನ್ನಡೆ

ಸಿಂದಗಿ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗೆ 74,463 ಮತಗಳು

ಸಿಂದಗಿ ವಿಧಾನಸಭಾ ಉಪಚುನಾವಣೆ 17ನೇ ಸುತ್ತಿನ ಮತ ಎಣಿಕೆ ಪೂರ್ಣಗೊಂಡಿದೆ.

ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಅವರು ಕಾಂಗ್ರೆಸ್ ಅಭ್ಯರ್ಥಿ ಅಶೋಕ ಮನಗೂಳಿ ಅವರಿಗಿಂತ 24,566 ಮತಗಳ ಮುನ್ನಡೆ ಸಾಧಿಸಿದ್ದಾರೆ.
 
ಅಭ್ಯರ್ಥಿಗಳು ಪಡೆದ ಮತಗಳ ವಿವರ (17 ಸುತ್ತು ಸೇರಿ)

*ಅಶೋಕ ಮನಗೂಳಿ (ಕಾಂಗ್ರೆಸ್): 49,897

*ರಮೇಶ ಭೂಸನೂರ (ಬಿಜೆಪಿ): 74,463

*ನಾಜಿಯಾ ಅಂಗಡಿ (ಜೆಡಿಎಸ್): 3,116

ಹಾನಗಲ್ ಉಪಚುನಾವಣೆ: ಕಾಂಗ್ರೆಸ್‌ಗೆ ಮುನ್ನಡೆ, ಜೆಡಿಎಸ್‌ಗಿಂತ ಪಕ್ಷೇತರ ಅಭ್ಯರ್ಥಿ ಮುಂದು..

ಹಾನಗಲ್ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ನಿರಂತರ ಮುನ್ನಡೆ ಕಾಯ್ದುಕೊಂಡಿದ್ದಾರೆ. 9ನೇ ಸುತ್ತಿನಲ್ಲಿ 4719 ಮತಗಳ ಭಾರಿ ಮುನ್ನಡೆ ಸಾಧಿಸಿದ್ದಾರೆ.

ಜೆಡಿಎಸ್ ಅಭ್ಯರ್ಥಿ ನಿಯಾಜ್ ಶೇಖ್ (432) ಅವರಿಗಿಂತ ಪಕ್ಷೇತರ ಅಭ್ಯರ್ಥಿ ನಜೀರ್ ಅಹಮದ್ ಸವಣೂರ (559)  127 ಹೆಚ್ಚುವರಿ ಮತಗಳನ್ನು ಗಳಿಸಿ, 3ನೇ ಸ್ಥಾನ ಕಾಯ್ದುಕೊಂಡಿದ್ದಾರೆ.

ಸಿಂದಗಿ ಉಪಚುನಾವಣೆ: ಬಿಜೆಪಿಯ ರಮೇಶ ಭೂಸನೂರ 20,761 ಮತಗಳ ಮುನ್ನಡೆ

ಸಿಂದಗಿ ವಿಧಾನಸಭಾ ಉಪ ಚುನಾವಣೆ 16ನೇ ಸುತ್ತಿನ ಮತ ಎಣಿಕೆ ಪೂರ್ಣಗೊಂಡಿದೆ.

ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಅವರು ಕಾಂಗ್ರೆಸ್ ಅಭ್ಯರ್ಥಿ ಅಶೋಕ ಮನಗೂಳಿ ಅವರಿಗಿಂತ 20,761 ಮತಗಳ ಮುನ್ನಡೆ ಸಾಧಿಸಿದ್ದಾರೆ.
 
ಅಭ್ಯರ್ಥಿಗಳು ಪಡೆದ ಮತಗಳ ವಿವರ (16 ಸುತ್ತು ಸೇರಿ)

*ಅಶೋಕ ಮನಗೂಳಿ (ಕಾಂಗ್ರೆಸ್): 47,683

*ರಮೇಶ ಭೂಸನೂರ (ಬಿಜೆಪಿ): 68,444

*ನಾಜಿಯಾ ಅಂಗಡಿ (ಜೆಡಿಎಸ್): 2965

ಹಾನಗಲ್ ಉಪಚುನಾವಣೆ: ಕಾಂಗ್ರೆಸ್‌ಗೆ 4,719 ಮತಗಳ ಮುನ್ನಡೆ

ಹಾನಗಲ್ ಉಪಚುನಾವಣೆ: ಇದುವರೆಗಿನ ಒಟ್ಟು ಫಲಿತಾಂಶ (9 ಸುತ್ತು ಸೇರಿ)

ಬಿಜೆಪಿ- ಶಿವರಾಜ ಸಜ್ಜನರ- 36,066

ಕಾಂಗ್ರೆಸ್- ಶ್ರೀನಿವಾಸ ಮಾನೆ- 40,785

ಜೆಡಿಎಸ್- ನಿಯಾಜ್ ಶೇಖ್- 432

ಕಾಂಗ್ರೆಸ್‌ಗೆ 4719 ಮತಗಳ ಮುನ್ನಡೆ

ಸಿಂದಗಿ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗೆ 60,478 ಮತಗಳು

ಸಿಂದಗಿ ವಿಧಾನಸಭಾ ಉಪ ಚುನಾವಣೆ 14ನೇ ಸುತ್ತಿನ ಮತ ಎಣಿಕೆ ಪೂರ್ಣಗೊಂಡಿದೆ.

ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಅವರು ಕಾಂಗ್ರೆಸ್ ಅಭ್ಯರ್ಥಿ ಅಶೋಕ ಮನಗೂಳಿ ಅವರಿಗಿಂತ 18,312 ಮತಗಳ ಮುನ್ನಡೆ ಸಾಧಿಸಿದ್ದಾರೆ.
 
ಅಭ್ಯರ್ಥಿಗಳು ಪಡೆದ ಮತಗಳ ವಿವರ (14 ಸುತ್ತು ಸೇರಿ)

*ಅಶೋಕ ಮನಗೂಳಿ (ಕಾಂಗ್ರೆಸ್): 42,166

*ರಮೇಶ ಭೂಸನೂರ (ಬಿಜೆಪಿ): 60,478

*ನಾಜಿಯಾ ಅಂಗಡಿ (ಜೆಡಿಎಸ್): 2736

ಹಾನಗಲ್ ಉಪಚುನಾವಣೆ: ಕಾಂಗ್ರೆಸ್‌ಗೆ 4,413 ಮತಗಳ ಮುನ್ನಡೆ

ಹಾನಗಲ್ ಉಪಚುನಾವಣೆ: ಇದುವರೆಗಿನ ಒಟ್ಟು ಫಲಿತಾಂಶ (8 ಸುತ್ತು ಸೇರಿ)

ಬಿಜೆಪಿ- ಶಿವರಾಜ ಸಜ್ಜನರ- 32,002

ಕಾಂಗ್ರೆಸ್- ಶ್ರೀನಿವಾಸ ಮಾನೆ- 36,415

ಜೆಡಿಎಸ್- ನಿಯಾಜ್ ಶೇಖ್- 347

ಕಾಂಗ್ರೆಸ್‌ಗೆ  4,413 ಮತಗಳ ಮುನ್ನಡೆ

ಸಿಂದಗಿ ಉಪಚುನಾವಣೆ: 13ನೇ ಸುತ್ತಿನಲ್ಲೂ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಮುನ್ನಡೆ

ಸಿಂದಗಿ ವಿಧಾನಸಭಾ ಉಪ ಚುನಾವಣೆ 13ನೇ ಸುತ್ತಿನ ಮತ ಎಣಿಕೆ ಪೂರ್ಣಗೊಂಡಿದೆ.

ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಅವರು ಕಾಂಗ್ರೆಸ್ ಅಭ್ಯರ್ಥಿ ಅಶೋಕ ಮನಗೂಳಿ ಅವರಿಗಿಂತ 18,873 ಮತಗಳ ಮುನ್ನಡೆ ಸಾಧಿಸಿದ್ದಾರೆ.
 
ಅಭ್ಯರ್ಥಿಗಳು ಪಡೆದ ಮತಗಳ ವಿವರ (13 ಸುತ್ತು ಸೇರಿ)

*ಅಶೋಕ ಮನಗೂಳಿ (ಕಾಂಗ್ರೆಸ್): 38,611

*ರಮೇಶ ಭೂಸನೂರ (ಬಿಜೆಪಿ): 57,484

*ನಾಜಿಯಾ ಅಂಗಡಿ (ಜೆಡಿಎಸ್): 2538

ಸಿಂದಗಿ ಉಪಚುನಾವಣೆ: ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ 19,718 ಮತಗಳ ಮುನ್ನಡೆ

ಸಿಂದಗಿ ವಿಧಾನಸಭಾ ಉಪ ಚುನಾವಣೆ 12ನೇ ಸುತ್ತಿನ ಮತ ಎಣಿಕೆ ಪೂರ್ಣಗೊಂಡಿದೆ.

ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಅವರು ಕಾಂಗ್ರೆಸ್ ಅಭ್ಯರ್ಥಿ ಅಶೋಕ ಮನಗೂಳಿ ಅವರಿಗಿಂತ 19,718 ಮತಗಳ ಮುನ್ನಡೆ ಸಾಧಿಸಿದ್ದಾರೆ.
 
ಅಭ್ಯರ್ಥಿಗಳು ಪಡೆದ ಮತಗಳ ವಿವರ (12 ಸುತ್ತು ಸೇರಿ)

*ಅಶೋಕ ಮನಗೂಳಿ (ಕಾಂಗ್ರೆಸ್): 34,688

*ರಮೇಶ ಭೂಸನೂರ (ಬಿಜೆಪಿ): 54,406

*ನಾಜಿಯಾ ಅಂಗಡಿ (ಜೆಡಿಎಸ್): 2333

ಹಾನಗಲ್ ಉಪಚುನಾವಣೆ: ಕಾಂಗ್ರೆಸ್‌ಗೆ 2,252 ಮತಗಳ ಮುನ್ನಡೆ

ಹಾನಗಲ್ ಉಪಚುನಾವಣೆ: ಇದುವರೆಗಿನ ಒಟ್ಟು ಫಲಿತಾಂಶ (7 ಸುತ್ತು ಸೇರಿ)

ಬಿಜೆಪಿ- ಶಿವರಾಜ ಸಜ್ಜನರ- 29,368
ಕಾಂಗ್ರೆಸ್- ಶ್ರೀನಿವಾಸ ಮಾನೆ- 31,620
ಜೆಡಿಎಸ್- ನಿಯಾಜ್ ಶೇಖ್- 314

ಕಾಂಗ್ರೆಸ್‌ಗೆ 2252 ಮತಗಳ ಮುನ್ನಡೆ

ಸಿಂದಗಿ ಉಪಚುನಾವಣೆ: ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ 18,577 ಮತಗಳ ಮುನ್ನಡೆ

ಸಿಂದಗಿ ವಿಧಾನಸಭಾ ಉಪ ಚುನಾವಣೆ 11ನೇ ಸುತ್ತಿನ ಮತ ಎಣಿಕೆ ಪೂರ್ಣಗೊಂಡಿದೆ.

ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಅವರು ಕಾಂಗ್ರೆಸ್ ಅಭ್ಯರ್ಥಿ ಅಶೋಕ ಮನಗೂಳಿ ಅವರಿಗಿಂತ 18,577 ಮತಗಳ ಮುನ್ನಡೆ ಸಾಧಿಸಿದ್ದಾರೆ.
 
ಅಭ್ಯರ್ಥಿಗಳು ಪಡೆದ ಮತಗಳ ವಿವರ (11 ಸುತ್ತು ಸೇರಿ)

*ಅಶೋಕ ಮನಗೂಳಿ (ಕಾಂಗ್ರೆಸ್): 31,473

*ರಮೇಶ ಭೂಸನೂರ (ಬಿಜೆಪಿ): 50,050

*ನಾಜಿಯಾ ಅಂಗಡಿ (ಜೆಡಿಎಸ್): 2067

ಸಿಂದಗಿ ಉಪಚುನಾವಣೆ: ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ 15,950 ಮತಗಳ ಮುನ್ನಡೆ

ಸಿಂದಗಿ ವಿಧಾನಸಭಾ ಉಪ ಚುನಾವಣೆ 9ನೇ ಸುತ್ತಿನ ಮತ ಎಣಿಕೆ ಪೂರ್ಣಗೊಂಡಿದೆ.

ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಅವರು ಕಾಂಗ್ರೆಸ್ ಅಭ್ಯರ್ಥಿ ಅಶೋಕ ಮನಗೂಳಿ ಅವರಿಗಿಂತ 15,950 ಮತಗಳ ಮುನ್ನಡೆ ಸಾಧಿಸಿದ್ದಾರೆ.
 
ಅಭ್ಯರ್ಥಿಗಳು ಪಡೆದ ಮತಗಳ ವಿವರ (9 ಸುತ್ತು ಸೇರಿ)

*ಅಶೋಕ ಮನಗೂಳಿ (ಕಾಂಗ್ರೆಸ್): 25,448

*ರಮೇಶ ಭೂಸನೂರ (ಬಿಜೆಪಿ): 41,398

*ನಾಜಿಯಾ ಅಂಗಡಿ (ಜೆಡಿಎಸ್): 1498

ಹಾನಗಲ್ ಉಪಚುನಾವಣೆ: ಕಾಂಗ್ರೆಸ್‌ಗೆ 1,498 ಮತಗಳ ಮುನ್ನಡೆ

ಹಾನಗಲ್ ಉಪಚುನಾವಣೆ: ಇದುವರೆಗಿನ ಒಟ್ಟು ಫಲಿತಾಂಶ

ಬಿಜೆಪಿ- ಶಿವರಾಜ ಸಜ್ಜನರ- 25,746
ಕಾಂಗ್ರೆಸ್- ಶ್ರೀನಿವಾಸ ಮಾನೆ- 27,244
ಜೆಡಿಎಸ್- ನಿಯಾಜ್ ಶೇಖ್- 244

ಕಾಂಗ್ರೆಸ್‌ಗೆ 1,498 ಮತಗಳ ಮುನ್ನಡೆ

ಹಾನಗಲ್ ಉಪಚುನಾವಣೆ: 6ನೇ ಸುತ್ತಿನಲ್ಲಿ ಕಾಂಗ್ರೆಸ್‌ಗೆ 178 ಮತಗಳ ಮುನ್ನಡೆ

ಹಾನಗಲ್ ಉಪಚುನಾವಣೆ: 6ನೇ ಸುತ್ತಿನ ಫಲಿತಾಂಶ

ಬಿಜೆಪಿ- ಶಿವರಾಜ ಸಜ್ಜನರ- 3722
ಕಾಂಗ್ರೆಸ್- ಶ್ರೀನಿವಾಸ ಮಾನೆ- 3900
ಜೆಡಿಎಸ್- ನಿಯಾಜ್ ಶೇಖ್- 40

ಕಾಂಗ್ರೆಸ್‌ಗೆ 178 ಮತಗಳ ಮುನ್ನಡೆ

ಸಿಂದಗಿ ಉಪಚುನಾವಣೆ: ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ 14,678 ಮತಗಳ ಮುನ್ನಡೆ

ಸಿಂದಗಿ ವಿಧಾನಸಭಾ ಉಪ ಚುನಾವಣೆ 8ನೇ ಸುತ್ತಿನ ಮತ ಎಣಿಕೆ ಪೂರ್ಣಗೊಂಡಿದೆ.

ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಅವರು ಕಾಂಗ್ರೆಸ್ ಅಭ್ಯರ್ಥಿ ಅಶೋಕ ಮನಗೂಳಿ ಅವರಿಗಿಂತ 14,678 ಮತಗಳ ಮುನ್ನಡೆ ಸಾಧಿಸಿದ್ದಾರೆ.
 
ಅಭ್ಯರ್ಥಿಗಳು ಪಡೆದ ಮತಗಳ ವಿವರ (8 ಸುತ್ತು ಸೇರಿ)

*ಅಶೋಕ ಮನಗೂಳಿ (ಕಾಂಗ್ರೆಸ್): 22,343

*ರಮೇಶ ಭೂಸನೂರ (ಬಿಜೆಪಿ): 37,021

*ನಾಜಿಯಾ ಅಂಗಡಿ (ಜೆಡಿಎಸ್): 1,328

ಹಾನಗಲ್ ಉಪಚುನಾವಣೆ: ಅಂಚೆ ಮತದಾನದಲ್ಲಿ ಬಿಜೆಪಿಗೆ ಮುನ್ನಡೆ

ಅಂಚೆ ಮತದಾನ ವಿವರ:

ಚಲಾಯಿತ ಮತಗಳು– 463
ನೋಟಾ 00
ತಿರಸ್ಕೃತ 11

***

ಬಿಜೆಪಿ– 236
ಕಾಂಗ್ರೆಸ್ –184
ಜೆಡಿಎಸ್ –4
ಉಡಚಪ್ಪ 02
ಫಕೀರಗೌಡ 02
ತಳವಾರ 01
ಉಮೇಶ 01
ನಜೀರ್ 01
ಪರುಶುರಾಮ ೦9
ಸಿದ್ದಪ್ಪ 11
ದೊಡ್ಡಲಿಂಗಣ್ಣವರ್ 01
ಸೋಮಶೇಖರ್ 00
ಹೊನ್ನಪ್ಪ 00

ಸಿಂದಗಿ ಉಪಚುನಾವಣೆ: ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ 13,325 ಮತಗಳ ಮುನ್ನಡೆ

ಸಿಂದಗಿ ವಿಧಾನಸಭಾ ಉಪಚುನಾವಣೆ 7ನೇ ಸುತ್ತಿನ ಮತ ಎಣಿಕೆ ಪೂರ್ಣಗೊಂಡಿದೆ.

ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಅವರು ಕಾಂಗ್ರೆಸ್ ಅಭ್ಯರ್ಥಿ ಅಶೋಕ ಮನಗೂಳಿ ಅವರಿಗಿಂತ 13,325 ಮತಗಳ ಮುನ್ನಡೆ ಸಾಧಿಸಿದ್ದಾರೆ.
 
ಅಭ್ಯರ್ಥಿಗಳು ಪಡೆದ ಮತಗಳ ವಿವರ

*ಅಶೋಕ ಮನಗೂಳಿ (ಕಾಂಗ್ರೆಸ್): 19,162

*ರಮೇಶ ಭೂಸನೂರ (ಬಿಜೆಪಿ): 32,487

*ನಾಜಿಯಾ ಅಂಗಡಿ (ಜೆಡಿಎಸ್): 1173

*ಡಾ.ಸುನೀಲ್ ಕುಮಾರ್ ಹೆಬ್ಬಿ(ಕರ್ನಾಟಕ ರಾಷ್ಟ್ರ ಸಮತಿ):280

*ಜಿಲಾನಿ ಗುಡುಸಾಬ ಮುಲ್ಲಾ(ಪಕ್ಷೇತರ):148

*ದೀಪಿಕಾ ಎಸ್.(ಪಕ್ಷೇತರ):139

*ನೋಟಾ: 326

ಹಾನಗಲ್ ಉಪಚುನಾವಣೆ: ಕಾಂಗ್ರೆಸ್‌ಗೆ 1,320 ಮತಗಳ ಮುನ್ನಡೆ

ಹಾನಗಲ್ ಉಪಚುನಾವಣೆ: ಇದುವರೆಗಿನ ಒಟ್ಟು ಫಲಿತಾಂಶ (5 ಸುತ್ತು ಸೇರಿ)

ಬಿಜೆಪಿ- ಶಿವರಾಜ ಸಜ್ಜನರ- 22,024
ಕಾಂಗ್ರೆಸ್- ಶ್ರೀನಿವಾಸ ಮಾನೆ- 23,344
ಜೆಡಿಎಸ್- ನಿಯಾಜ್ ಶೇಖ್- 204

ಕಾಂಗ್ರೆಸ್‌ಗೆ 1,320 ಮತಗಳ ಮುನ್ನಡೆ

ಸಿಂದಗಿ ಉಪಚುನಾವಣೆ: ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ 11,637 ಮತಗಳ ಮುನ್ನಡೆ

ಸಿಂದಗಿ ವಿಧಾನಸಭಾ ಉಪಚುನಾವಣೆ 6ನೇ ಸುತ್ತಿನ ಮತ ಎಣಿಕೆ ಪೂರ್ಣಗೊಂಡಿದೆ.

ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಅವರು ಕಾಂಗ್ರೆಸ್ ಅಭ್ಯರ್ಥಿ ಅಶೋಕ ಮನಗೂಳಿ ಅವರಿಗಿಂತ 11,637 ಮತಗಳ ಮುನ್ನಡೆ ಸಾಧಿಸಿದ್ದಾರೆ.
 
ಅಭ್ಯರ್ಥಿಗಳು ಪಡೆದ ಮತಗಳ ವಿವರ (6 ಸುತ್ತು ಸೇರಿ)

*ಅಶೋಕ ಮನಗೂಳಿ (ಕಾಂಗ್ರೆಸ್): 16,160

*ರಮೇಶ ಭೂಸನೂರ (ಬಿಜೆಪಿ): 27,791

*ನಾಜಿಯಾ ಅಂಗಡಿ (ಜೆಡಿಎಸ್): 941

*ಡಾ.ಸುನೀಲ್ ಕುಮಾರ್ ಹೆಬ್ಬಿ(ಕರ್ನಾಟಕ ರಾಷ್ಟ್ರ ಸಮತಿ):242

*ಜಿಲಾನಿ ಗುಡುಸಾಬ ಮುಲ್ಲಾ(ಪಕ್ಷೇತರ):132

*ದೀಪಿಕಾ ಎಸ್.(ಪಕ್ಷೇತರ):127

*ನೋಟಾ: 287

ಹಾನಗಲ್ ಉಪಚುನಾವಣೆ: 5ನೇ ಸುತ್ತಿನ ಫಲಿತಾಂಶ

ಹಾನಗಲ್ ಉಪಚುನಾವಣೆ: 5ನೇ ಸುತ್ತಿನ ಫಲಿತಾಂಶ

ಬಿಜೆಪಿ- ಶಿವರಾಜ ಸಜ್ಜನರ- 4255
ಕಾಂಗ್ರೆಸ್- ಶ್ರೀನಿವಾಸ ಮಾನೆ- 5325
ಜೆಡಿಎಸ್- ನಿಯಾಜ್ ಶೇಖ್- 55

ಕಾಂಗ್ರೆಸ್‌ಗೆ 1,070 ಮತಗಳ ಮುನ್ನಡೆ

ಸಿಂದಗಿ ಉಪಚುನಾವಣೆ: ಬಿಜೆಪಿಗೆ ಮುನ್ನಡೆ

ವಿಜಯಪುರ: ರಾಜ್ಯ ರಾಜಕೀಯದಲ್ಲಿ ಭಾರೀ ಕುತೂಹಲ ಕೆರಳಿಸಿರುವ ಸಿಂದಗಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಮುನ್ನಡೆ ಸಾಧಿಸಿದೆ.

ಮತ ಎಣಿಕೆ ಐದು ಸುತ್ತುಗಳು ಪೂರ್ಣಗೊಂಡಿದ್ದು, ಐದೂ ಸುತ್ತುಗಳಲ್ಲೂ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ.

ಕಾಂಗ್ರೆಸ್ ಅಭ್ಯರ್ಥಿ ಅಶೋಕ ಮನಗೂಳಿ 13, 563 ಮತಗಳನ್ನು ಪಡೆದುಕೊಂಡಿದ್ದು, ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ 23,314 ಮತಗಳನ್ನು ಪಡೆದು ಮುನ್ನಡೆ ಕಾಯ್ದುಕೊಂಡಿದ್ದಾರೆ.

ಜೆಡಿಎಸ್ ಅಭ್ಯರ್ಥಿ ನಾಜಿಯಾ ಅಂಗಡಿ ಅವರಿಗೆ ತೀವ್ರ ಹಿನ್ನಡೆಯಾಗಿದೆ. ಐದು ಸುತ್ತು ಸೇರಿ ಕೇವಲ 710 ಮತಗಳನ್ನು ಪಡೆದುಕೊಂಡಿದ್ದಾರೆ.

ಹಾನಗಲ್ ಉಪಚುನಾವಣೆ: ಕಾಂಗ್ರೆಸ್‌ಗೆ 250 ಮತಗಳ ಮುನ್ನಡೆ

ಹಾನಗಲ್ ಉಪಚುನಾವಣೆ: ಇದುವರೆಗಿನ ಒಟ್ಟು ಫಲಿತಾಂಶ (4 ಸುತ್ತು ಸೇರಿ)

ಬಿಜೆಪಿ- ಶಿವರಾಜ ಸಜ್ಜನರ- 17,769
ಕಾಂಗ್ರೆಸ್- ಶ್ರೀನಿವಾಸ ಮಾನೆ- 18,019
ಜೆಡಿಎಸ್- ನಿಯಾಜ್ ಶೇಖ್- 149

ಕಾಂಗ್ರೆಸ್‌ಗೆ 250 ಮತಗಳ ಮುನ್ನಡೆ

ಸಿಂದಗಿ ಉಪ ಚುನಾವಣೆ: ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ 9,751 ಮತಗಳ ಮುನ್ನಡೆ

ಸಿಂದಗಿ ವಿಧಾನಸಭಾ ಉಪ ಚುನಾವಣೆ 5ನೇ ಸುತ್ತಿನ ಮತ ಎಣಿಕೆ ಪೂರ್ಣಗೊಂಡಿದೆ.

ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಅವರು ಕಾಂಗ್ರೆಸ್ ಅಭ್ಯರ್ಥಿ ಅಶೋಕ ಮನಗೂಳಿ ಅವರಿಗಿಂತ 9,751 ಮತಗಳ ಮುನ್ನಡೆ ಸಾಧಿಸಿದ್ದಾರೆ.
 
ಅಭ್ಯರ್ಥಿಗಳು ಪಡೆದ ಮತಗಳ ವಿವರ(5 ಸುತ್ತು ಸೇರಿ)

*ಅಶೋಕ ಮನಗೂಳಿ (ಕಾಂಗ್ರೆಸ್): 13,563

*ರಮೇಶ ಭೂಸನೂರ (ಬಿಜೆಪಿ): 23,314

*ನಾಜಿಯಾ ಅಂಗಡಿ (ಜೆಡಿಎಸ್): 710

*ಡಾ.ಸುನೀಲ್ ಕುಮಾರ್ ಹೆಬ್ಬಿ(ಕರ್ನಾಟಕ ರಾಷ್ಟ್ರ ಸಮತಿ): 199

*ಜಿಲಾನಿ ಗುಡುಸಾಬ ಮುಲ್ಲಾ(ಪಕ್ಷೇತರ): 101

*ದೀಪಿಕಾ ಎಸ್.(ಪಕ್ಷೇತರ): 100

*ನೋಟಾ: 234

ಹಾನಗಲ್ ಉಪಚುನಾವಣೆ: ಮತ್ತೆ ಕಾಂಗ್ರೆಸ್‌ ಮುನ್ನಡೆ

ಹಾನಗಲ್ ಉಪಚುನಾವಣೆ: ಇದುವರೆಗಿನ ಒಟ್ಟು ಫಲಿತಾಂಶ (3 ಸುತ್ತು ಸೇರಿ)

ಬಿಜೆಪಿ- ಶಿವರಾಜ ಸಜ್ಜನರ- 13375
ಕಾಂಗ್ರೆಸ್- ಶ್ರೀನಿವಾಸ ಮಾನೆ- 13414
ಜೆಡಿಎಸ್- ನಿಯಾಜ್ ಶೇಖ್- 115

ಕಾಂಗ್ರೆಸ್‌ಗೆ 39 ಮತಗಳ ಮುನ್ನಡೆ

ಸಿಂದಗಿ ಉಪಚುನಾವಣೆ: ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ 7008 ಮತಗಳ ಮುನ್ನಡೆ

ಸಿಂದಗಿ ವಿಧಾನಸಭಾ ಉಪ ಚುನಾವಣೆ ನಾಲ್ಕನೇ ಸುತ್ತಿನ ಮತ ಎಣಿಕೆ ಪೂರ್ಣಗೊಂಡಿದೆ.

ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಅವರು ಕಾಂಗ್ರೆಸ್ ಅಭ್ಯರ್ಥಿ ಅಶೋಕ ಮನಗೂಳಿ ಅವರಿಗಿಂತ 7008 ಮತಗಳ ಮುನ್ನಡೆ ಸಾಧಿಸಿದ್ದಾರೆ.

ಹಾನಗಲ್ ಉಪಚುನಾವಣೆ: ಬಿಜೆಪಿಗೆ ಅಲ್ಪ ಅಂತರದ ಮುನ್ನಡೆ

ಹಾವೇರಿ: ‌‌ಹಾನಗಲ್ ಉಪಚುನಾವಣೆ ಎರಡನೇ ಸುತ್ತಿನ  ಮತ ಎಣಿಕೆಯಲ್ಲಿ ಬಿಜೆಪಿಗೆ 54 ಮತಗಳ ಮುನ್ನಡೆ.

ಎರಡು ಸುತ್ತು ಸೇರಿ ಒಟ್ಟು 128 ಮತಗಳ ಮುನ್ನಡೆ ಕಾಯ್ದುಕೊಂಡ ಕಾಂಗ್ರೆಸ್ ಅಭ್ಯರ್ಥಿ ಮಾನೆ.

ಕಾಂಗ್ರೆಸ್- 9025 (ಶ್ರೀನಿವಾಸ ಮಾನೆ)
ಬಿಜೆಪಿ- 8897 (ಶಿವರಾಜ ಸಜ್ಜನರ)
ಜೆಡಿಎಸ್- 75 (ನಿಯಾಜ್ ಶೇಖ್)

ಸಿಂದಗಿ ಉಪ ಚುನಾವಣೆ: ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರಗೆ 4850 ಮತಗಳ ಮುನ್ನಡೆ

ಸಿಂದಗಿ ವಿಧಾನಸಭಾ ಉಪ ಚುನಾವಣೆ ಮೂರನೇ ಸುತ್ತಿನ ಮತ ಎಣಿಕೆ ಪೂರ್ಣಗೊಂಡಿದೆ.

ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಅವರು ಕಾಂಗ್ರೆಸ್ ಅಭ್ಯರ್ಥಿ ಅಶೋಕ ಮನಗೂಳಿ ಅವರಿಗಿಂತ 4850 ಮತಗಳ ಮುನ್ನಡೆ ಸಾಧಿಸಿದ್ದಾರೆ.
 
ಅಭ್ಯರ್ಥಿಗಳು ಪಡೆದ ಮತಗಳ ವಿವರ (ಮೂರು ಸುತ್ತು ಸೇರಿ)

*ಅಶೋಕ ಮನಗೂಳಿ (ಕಾಂಗ್ರೆಸ್): 8231

*ರಮೇಶ ಭೂಸನೂರ (ಬಿಜೆಪಿ): 13,081

*ನಾಜಿಯಾ ಅಂಗಡಿ (ಜೆಡಿಎಸ್): 423

*ಡಾ.ಸುನೀಲ್ ಕುಮಾರ್ ಹೆಬ್ಬಿ(ಕರ್ನಾಟಕ ರಾಷ್ಟ್ರ ಸಮತಿ):100

*ಜಿಲಾನಿ ಗುಡುಸಾಬ ಮುಲ್ಲಾ(ಪಕ್ಷೇತರ): 57

*ದೀಪಿಕಾ ಎಸ್.(ಪಕ್ಷೇತರ): 49

*ನೋಟಾ: 133

ಹಾನಗಲ್ ಉಪಚುನಾವಣೆ: ಎರಡನೇ ಸುತ್ತಿನ ಮತ ಎಣಿಕೆ ಮುಕ್ತಾಯ

ಬಿಜೆಪಿಗೆ ಎರಡನೇ ಸುತ್ತಿನಲ್ಲಿ 54 ಮತಗಳ ಮುನ್ನಡೆ

ಕಾಂಗ್ರೆಸ್ಸಿನ ಶ್ರೀನಿವಾಸ ಮಾನೆ - 4547

ಬಿಜೆಪಿಯ ಶಿವರಾಜ ಸಜ್ಜನರ - 4601

ಜೆಡಿಎಸ್- 50

ಸಿಂದಗಿ ಉಪ ಚುನಾವಣೆ: ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಮುನ್ನಡೆ

ಸಿಂದಗಿ ವಿಧಾನಸಭಾ ಉಪ ಚುನಾವಣೆ ಎರಡನೇ ಸುತ್ತಿನ ಮತ ಎಣಿಕೆ ಮುಗಿದಿದ್ದು, ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಅವರು ಕಾಂಗ್ರೆಸ್ ಅಭ್ಯರ್ಥಿ ಅಶೋಕ ಮನಗೂಳಿ ಅವರಿಗಿಂತ 4031 ಮತಗಳ ಮುನ್ನಡೆ ಸಾಧಿಸಿದ್ದಾರೆ.

ಹಾನಗಲ್ ಉಪಚುನಾವಣೆ: ಎರಡನೇ ಸುತ್ತಿನಲ್ಲೂ ಕಾಂಗ್ರೆಸ್‌ ಮುನ್ನಡೆ

ಹಾನಗಲ್ ಉಪಚುನಾವಣೆ: ಎರಡನೇ ಸುತ್ತು ಮುಕ್ತಾಯಗೊಂಡಿದ್ದು ಒಟ್ಟು 8 ಮತಗಳಿಂದ ಕಾಂಗ್ರೆಸ್ ಮುನ್ನಡೆ ಸಾಧಿಸಿದ್ದಾರೆ. ಒಟ್ಟು 190 ಮತಗಳಿಂದ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಅವರಿಗೆ ಮುನ್ನಡೆಯಾಗಿದೆ.

ಸಿಂದಗಿ ವಿಧಾನಸಭಾ ಉಪ ಚುನಾವಣೆ: ಎರಡನೇ ಸುತ್ತಿನಲ್ಲಿ ಅಭ್ಯರ್ಥಿಗಳು ಪಡೆದ ಮತಗಳು

ಸಿಂದಗಿ ವಿಧಾನಸಭಾ ಉಪ ಚುನಾವಣೆ ಎರಡನೇ ಸುತ್ತಿನಲ್ಲಿ ಅಭ್ಯರ್ಥಿಗಳು ಪಡೆದ ಮತಗಳ ವಿವರ:

*ಅಶೋಕ ಮನಗೂಳಿ (ಕಾಂಗ್ರೆಸ್): 5614

*ರಮೇಶ ಭೂಸನೂರ (ಬಿಜೆಪಿ): 9645

*ನಾಜಿಯಾ ಅಂಗಡಿ (ಜೆಡಿಎಸ್): 282

*ಡಾ.ಸುನೀಲ್ ಕುಮಾರ್ ಹೆಬ್ಬಿ(ಕರ್ನಾಟಕ ರಾಷ್ಟ್ರ ಸಮತಿ): 74

*ಜಿಲಾನಿ ಗುಡುಸಾಬ ಮುಲ್ಲಾ(ಪಕ್ಷೇತರ): 44

*ದೀಪಿಕಾ ಎಸ್.(ಪಕ್ಷೇತರ): 34

*ನೋಟಾ: 103

ಹಾನಗಲ್‌ ಉಪಚುನಾವಣೆ: ಜೆಡಿಎಸ್ ಅಭ್ಯರ್ಥಿಗಿಂತ ಪಕ್ಷೇತರ ಅಭ್ಯರ್ಥಿಗೆ ಹೆಚ್ಚು ಮತ

ಮೊದಲ ಸುತ್ತಿನಲ್ಲಿ ಜೆಡಿಎಸ್ ಅಭ್ಯರ್ಥಿಗಿಂತ ಹೆಚ್ಚುವರಿ ಮತ ಪಡೆದ ಪಕ್ಷೇತರ ಅಭ್ಯರ್ಥಿ ಮತ್ತು ಕೆಆರ್‌ಎಸ್ ಅಭ್ಯರ್ಥಿ

ಜೆಡಿಎಸ್ ಅಭ್ಯರ್ಥಿ ನಿಯಾಜ್ ಶೇಖ್ ( 25)

ಕೆಆರ್‌ಎಸ್ ಪಕ್ಷದ ಉದ್ದ ಕಾಲ ( 27)

ಪಕ್ಷೇತರ ಅಭ್ಯರ್ಥಿ ಸಿದ್ದಪ್ಪ ಕಲ್ಲಪ್ಪ ಪೂಜಾರ (36)

ಒಟ್ಟು 13 ಸೇವಾ ಮತಗಳಲ್ಲಿ ಬಿಜೆಪಿ 7 ಹಾಗೂ ಕಾಂಗ್ರೆಸ್ 6 ಮತಗಳನ್ನು ಪಡೆದಿದ್ದು, ಬಿಜೆಪಿ 1 ಮತದ ಮುನ್ನಡೆ ಪಡೆದಿದೆ.

ಹಾನಗಲ್ ಉಪಚುನಾವಣೆ: ಮೊದಲ ಸುತ್ತಿನಲ್ಲಿ 25 ನೋಟಾ ಮತಗಳು

ಮೊದಲ ಸುತ್ತಿನಲ್ಲಿ 25 ನೋಟಾ ಮತಗಳು ದಾಖಲಾಗಿವೆ. 25 ಮತದಾರರು 13 ಅಭ್ಯರ್ಥಿಗಳ ಪೈಕಿ ಯಾರಿಗೂ ಮಣೆ ಹಾಕಿಲ್ಲ!

ಹಾನಗಲ್ ಉಪಚುನಾವಣೆ: ಎರಡನೇ ಸುತ್ತಿನ ಮತ ಎಣಿಕೆ ಆರಂಭ

ಎರಡನೇ ಸುತ್ತಿನ ಮತ ಎಣಿಕೆ ಆರಂಭವಾಗಿದ್ದು, 19ನೇ ಸುತ್ತಿನಲ್ಲಿ ಅಂತಿಮ ಫಲಿತಾಂಶ ಹೊರಬೀಳಲಿದೆ.

ಮತ ಎಣಿಕೆ ಕೇಂದ್ರಕ್ಕೆ ಭೇಟಿ ನೀಡಿರುವ ಬಿಜೆಪಿ ಅಭ್ಯರ್ಥಿ ಶಿವರಾಜ ಸಜ್ಜನರ ಅವರು ಮತ ಎಣಿಕೆ ಪ್ರಕ್ರಿಯೆ ವೀಕ್ಷಿಸುತ್ತಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಬೆಳಿಗ್ಗೆ 10.30ಕ್ಕೆ ಮತ ಎಣಿಕೆ ಕೇಂದ್ರಕ್ಕೆ ಭೇಟಿ ನೀಡುವ ಸಾಧ್ಯತೆ.

ಜೆಡಿಎಸ್ ಅಭ್ಯರ್ಥಿ ನಿಯಾಜ್ ಶೇಖ್ ಮತ ಎಣಿಕೆ ಕೇಂದ್ರದತ್ತ ಸುಳಿದಿಲ್ಲ.

ಬೆಳಿಗ್ಗೆ 11 ಗಂಟೆಗೆ ಕ್ಷೇತ್ರದ ಸೋಲು-ಗೆಲುವಿನ ಬಗ್ಗೆ ಸ್ಪಷ್ಟ ಚಿತ್ರಣ ಸಿಗಲಿದ್ದು, ಅಧಿಕೃತ ಫಲಿತಾಂಶ ಮಧ್ಯಾಹ್ನ 2 ಗಂಟೆಯ ನಂತರ ಹೊರಬೀಳುವ ಸಾಧ್ಯತೆ ಇದೆ.

ಸಿಂದಗಿ ಉಪ ಚುನಾವಣೆ: ಮೊದಲ ಸುತ್ತಿನ ಮತಗಳ ವಿವರ

ಸಿಂದಗಿ ವಿಧಾನಸಭಾ ಉಪ ಚುನಾವಣೆ ಮೊದಲ ಸುತ್ತಿನಲ್ಲಿ ಅಭ್ಯರ್ಥಿಗಳು ಪಡೆದ ಮತಗಳ ವಿವರ:

*ಅಶೋಕ ಮನಗೂಳಿ (ಕಾಂಗ್ರೆಸ್): 2054

*ರಮೇಶ ಭೂಸನೂರ (ಬಿಜೆಪಿ): 5255

*ನಾಜಿಯಾ ಅಂಗಡಿ (ಜೆಡಿಎಸ್): 73

ಸಿಂದಗಿ ವಿಧಾನಸಭೆ ಉಪ ಚುನಾವಣೆ: ಮೊದಲ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ.

ಕಾಂಗ್ರೆಸ್:2054

ಬಿಜೆಪಿ:5255

ಜೆಡಿಎಸ್:73

ಹಾನಗಲ್ ಮೊದಲ ಸುತ್ತಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆಗೆ 182 ಮತಗಳ ಮುನ್ನಡೆ

ಹಾನಗಲ್ ಉಪಚುನಾವಣೆ ಫಲಿತಾಂಶ ಮೊದಲ ಸುತ್ತು

ಕಾಂಗ್ರೆಸ್- 4478 ಮತ
ಬಿಜೆಪಿ- 4296 ಮತ
ಜೆಡಿಎಸ್- 25 ಮತ

ಹಾನಗಲ್ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್‌ ಮುನ್ನಡೆ

ಹಾನಗಲ್‌ ವಿಧಾನಸಭಾ ಕ್ಷೇತ್ರದ ಉಪಚುನಾವಣೆ: ಇವಿಎಂ ಮತ ಎಣಿಕೆಯ ಎರಡು ಕೊಠಡಿಗಳ ಪೈಕಿ ಒಂದು ಕೊಠಡಿಯಲ್ಲಿ ಕಾಂಗ್ರೆಸ್ ಮುನ್ನಡೆ

ಹಾನಗಲ್‌: 13 ಅಭ್ಯರ್ಥಿಗಳ ಹಣೆಬರಹ ಬಹಿರಂಗ ಇಂದು

ಹಾವೇರಿ: ಹಾನಗಲ್‌ ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಕಣದಲ್ಲಿರುವ 13 ಅಭ್ಯರ್ಥಿಗಳ ಹಣೆಬರಹ ಇಂದು ಬಹಿರಂಗವಾಗಲಿದೆ.

ಅಭ್ಯರ್ಥಿಗಳು:

ಶಿವರಾಜ ಶರಣಪ್ಪ ಸಜ್ಜನರ (ಬಿಜೆಪಿ), ಶ್ರೀನಿವಾಸ ಮಾನೆ (ಕಾಂಗ್ರೆಸ್), ನಿಯಾಜ್‌ ಶೇಖ್‌ (ಜೆಡಿಎಸ್‌), ಉಡಚಪ್ಪ ಉದ್ದನಕಾಲ (ಕರ್ನಾಟಕ ರಾಷ್ಟ್ರ ಸಮಿತಿ), ಫಕ್ಕೀರಗೌಡ ಶಂಕರಗೌಡ ಗಾಜಿಗೌಡ್ರ (ರೈತ ಭಾರತ ಪಕ್ಷ), ಶಿವಕುಮಾರ ತಳವಾರ (ಲೋಕಶಕ್ತಿ ಪಕ್ಷ), ಉಮೇಶ ಕೃಷ್ಣಪ್ಪ ದೈವಜ್ಞ (ಪಕ್ಷೇತರ), ನಜೀರ ಅಹಮದ್‌ ಸವಣೂರ (ಪಕ್ಷೇತರ), ಪರಶುರಾಮ ಹೊಂಗಲ (ಪಕ್ಷೇತರ), ಸಿದ್ದಪ್ಪ ಕಲ್ಲಪ್ಪ ಪೂಜಾರ (ಪಕ್ಷೇತರ), ಎಸ್.ಎಸ್. ದೊಡ್ಡಲಿಂಗಣ್ಣನವರ, ಸೋಮಶೇಖರ ಮಹದೇವಪ್ಪ ಕೋತಂಬರಿ(ಪಕ್ಷೇತರ), ಹೊನ್ನಪ್ಪ ಹನುಮಂತಪ್ಪ ಅಕ್ಕಿವಳ್ಳಿ(ಪಕ್ಷೇತರ).

ಹಾವೇರಿ: ಮತ ಎಣಿಕೆ ಕೇಂದ್ರದಲ್ಲಿ ಮೊಬೈಲ್‌ ನಿಷೇಧ, 144 ಸೆಕ್ಷನ್‌ ಜಾರಿ

ಎಣಿಕೆ ಕೇಂದ್ರದಲ್ಲಿ ಮೊಬೈಲ್ ದೂರವಾಣಿಗಳು, ಎಲೆ ಅಡಿಕೆ, ಗುಟ್ಕಾ, ಬೀಡಿ-ಸಿಗರೇಟ್‌, ಪಾನ್ ಮಸಾಲಾ, ತಿಂಡಿ ತಿನಿಸುಗಳು, ಕುಡಿಯುವ ನೀರು ಮತ್ತು ಶಸ್ತ್ರಾಸ್ತ್ರ ಮುಂತಾದವುಗಳಿಗೆ ಪ್ರವೇಶವಿಲ್ಲ. ಚಾಕು, ಕತ್ತರಿ, ಕಡ್ಡಿಪೆಟ್ಟಿಗೆ ಮತ್ತು ಅಗ್ನಿ ಅವಘಡಕ್ಕೆ ಆಹ್ವಾನ ನೀಡುವ ವಸ್ತುಗಳನ್ನು ನಿಷೇಧಿಸಲಾಗಿದೆ.

ಜಿಲ್ಲೆಯಾದ್ಯಂತ 144 ಸೆಕ್ಷನ್‌ ಜಾರಿ; ವಿಜಯೋತ್ಸವ ನಿಷೇಧ

ಈಗಾಗಲೇ ಹಾವೇರಿ ಜಿಲ್ಲೆಯಾದ್ಯಂತ 144 ಕಲಂ ಜಾರಿಗೊಳಿಸಲಾಗಿದೆ. ಮದ್ಯ ಮಾರಾಟ ನಿಷೇಧಿಸಲಾಗಿದೆ. ಹಾನಗಲ್, ಹಾವೇರಿ, ದೇವಗಿರಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ವಿಶೇಷ ಪೊಲೀಸ್ ಭದ್ರತೆ ಹಾಕಲಾಗಿದೆ. ವಿಜಯೋತ್ಸವ, ಮೆರವಣಿಗೆ ನಿಷೇಧಿಸಲಾಗಿದೆ. ಜಿಲ್ಲೆಯಾದ್ಯಂತ ನ.5ರವರೆಗೂ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ. ಪ್ರಮಾಣ ಪತ್ರ ಪಡೆಯಲು ಅಭ್ಯಥಿ೯ ಜೊತೆ ಇಬ್ಬರಿಗೆ ಮಾತ್ರ ಅವಕಾಶ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹನುಮಂತರಾಯ ತಿಳಿಸಿದರು.

ಸಿಂದಗಿ ಉಪ ಚುನಾವಣೆ ಮತ ಎಣಿಕೆ: ಬಿಗಿ ಭದ್ರತೆ

ಮತ ಎಣಿಕೆ ಕೇಂದ್ರದ ಒಳಗೆ ಮತ್ತು ಹೊರಗೆ ಭದ್ರತೆ ಮತ್ತು ಕಾನೂನು ಸುವ್ಯವಸ್ಥೆಗೆ 4 ಡಿವೈಎಸ್ಪಿ, 5 ಸಿಪಿಐ, 23 ಪಿಎಸ್‌ಪಿ, 25 ಎಎಸ್‌ಐ, 282 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಸೈನಿಕ್‌ ಶಾಲೆಯ ಹೊರಭಾಗದಲ್ಲಿ ಕಾಂಗ್ರೆಸ್‌, ಬಿಜೆಪಿ, ಜೆಡಿಎಸ್‌ ಪಕ್ಷಗಳ ಮುಖಂಡರು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ನೆರೆದಿದ್ದಾರೆ.

ಸಿಂದಗಿ ಉಪ ಚುನಾವಣೆ: ವಿಜಯಪುರ ನಗರದ ಸೈನಿಕ ಶಾಲೆಯಲ್ಲಿ ಮತ ಎಣಿಕೆ

ವಿಜಯಪುರ: ರಾಜ್ಯದ ಗಮನ ಸೆಳೆದಿರುವ ಸಿಂದಗಿ ಉಪ ಚುನಾವಣೆ ಮತ ಎಣಿಕೆ ಆರಂಭವಾಗಿದೆ. ವಿಜಯಪುರ ನಗರದ ಸೈನಿಕ ಶಾಲೆಯಲ್ಲಿ ನಡೆಯತ್ತಿರುವ ಮತ ಎಣಿಕೆ ಕಾರ್ಯದ ಆರಂಭದಲ್ಲಿ ಅಂಚೆ ಮತಪತ್ರಗಳ ಎಣಿಕೆ ನಡೆದಿದೆ.

ಮತಎಣಿಕೆ ಎರಡು ಕೊಠಡಿಗಳನ್ನು ವ್ಯವಸ್ಥೆ ಮಾಡಲಾಗಿದೆ. ಪ್ರತಿ ಕೊಠಡಿಯಲ್ಲಿ ತಲಾ 7 ಟೇಬಲ್‌ನಂತೆ  ಒಟ್ಟು 14 ಟೇಬಲ್‌ ಇದೆ. ಪ್ರತಿ ಟೇಬಲ್‌ಗೆ ತಲಾ ಒಬ್ಬ ಮೈಕ್ರೋ ಅಬ್ಸರ್ವರ್ ಒಬ್ಬ ಮತಎಣಿಕೆ ಮೇಲ್ವಿಚಾರಕ, ಒಬ್ಬ ಮತಎಣಿಕೆ ಸಹಾಯಕರು ಸೇರಿದಂತೆ ಒಟ್ಟು 60 ಸಿಬ್ಬಂದಿ ಮತ ಎಣಿಕೆಯಲ್ಲಿ ತೊಡಗಿದ್ದಾರೆ. ಒಟ್ಟು 22 ಸುತ್ತು ಮತಎಣಿಕೆ ನಡೆಯಲಿದೆ.

ಹಾನಗಲ್‌ ಉಪಚುನಾವಣೆ: ಅಂಚೆ ಮತಗಳ ಎಣಿಕೆ ಆರಂಭ

ಇಟಿಪಿಬಿಎಸ್‌ ಮತ್ತು ಅಂಚೆ ಮತಪತ್ರಗಳ ಎಣಿಕೆ ಆರಂಭವಾಗಿದೆ. ಒಟ್ಟು 463 ಅಂಚೆ ಮತಪತ್ರಗಳು, 14 ಇಟಿಪಿಬಿಎಸ್‌ ಮತಗಳು ಚಲಾವಣೆ ಆಗಿವೆ.

ಹಾವೇರಿ: ಹಾನಗಲ್ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಆರಂಭ

ಬಿಜೆಪಿ–ಕಾಂಗ್ರೆಸ್‌ ನಡುವಿನ ತೀವ್ರ ಜಿದ್ದಾಜಿದ್ದಿ ಕಣವಾದ ಹಾನಗಲ್‌ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಮಂಗಳವಾರ ನಗರದ ಸರ್ಕಾರಿ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ಬೆಳಿಗ್ಗೆ 8ಕ್ಕೆ ಆರಂಭಗೊಂಡಿತು.

ಶಾಸಕರಾಗಿದ್ದ ಸಿ.ಎಂ. ಉದಾಸಿ ನಿಧನರಾದ ಹಿನ್ನೆಲೆಯಲ್ಲಿ ಹಾನಗಲ್‌ ಕ್ಷೇತ್ರಕ್ಕೆ ನಡೆದ ಉಪಚುನಾವಣೆ ಇಡೀ ರಾಜ್ಯದ ಗಮನ ಸೆಳೆದಿದೆ. ಈಗ ಎಲ್ಲರ ಚಿತ್ತ ಮತ ಎಣಿಕೆಯತ್ತ ನೆಟ್ಟಿದೆ. ಬಿಜೆಪಿ ಅಭ್ಯರ್ಥಿ ಶಿವರಾಜ ಸಜ್ಜನರ, ಕಾಂಗ್ರೆಸ್‌ ಅಭ್ಯರ್ಥಿ ಶ್ರೀನಿವಾಸ ಮಾನೆ, ಜೆಡಿಎಸ್‌ ಅಭ್ಯರ್ಥಿ ನಿಯಾಜ್‌ ಶೇಖ್‌ ಸೇರಿದಂತೆ 13 ಅಭ್ಯರ್ಥಿಗಳ ಹಣೆಬರಹ ಇಂದು ನಿರ್ಧಾರವಾಗಲಿದೆ.

ಯಾರಿಗೆ ಸಿಂದಗಿ ಪಟ್ಟ?

ಕಾಂಗ್ರೆಸ್‌ನ ಅಶೋಕ ಮನಗೂಳಿ, ಬಿಜೆಪಿಯ ರಮೇಶ ಭೂಸನೂರ ಮತ್ತು ಜೆಡಿಎಸ್‌ನ ನಾಜಿಯಾ ಶಕೀಲ್‌ ನಡುವೆ ತುರುಸಿನ ಪೈಪೋಟಿ ನಡೆದಿದ್ದು, ಈ ಮೂವರಲ್ಲಿ ಯಾರು ಮುಂದಿನ ಒಂದೂವರೆ ವರ್ಷದ ಅವಧಿಗೆ ಸಿಂದಗಿ ಶಾಸಕರಾಗುತ್ತಾರೆ ಎಂಬ ಕುತೂಹಲದ ಪ್ರಶ್ನೆಗೆ ಉತ್ತರ ಲಭಿಸಲಿದೆ.

ಒಂದೆಡೆ ಕಾಂಗ್ರೆಸ್‌ನವರು, ಇನ್ನೊಂದೆಡೆ ಬಿಜೆಪಿಯವರು ತಮ್ಮದೇ ಗೆಲುವು ಎಂಬ ಲೆಕ್ಕೆಚಾರದಲ್ಲಿ ಬೀಗುತ್ತಿದ್ದಾರೆ. ವಿಜಯೋತ್ಸವಕ್ಕೂ ಅಣಿಯಾಗಿದ್ದಾರೆ. ಮತದಾರರ ಆಶೀರ್ವಾದ ಯಾರ ಪರ ಇರಲಿದೆ ಎಂಬುದು ಇನ್ನಷ್ಟೇ ಬಹಿರಂಗವಾಗಬೇಕಿದೆ.

ದೇಶದ 29 ವಿಧಾನಸಭಾ ಕ್ಷೇತ್ರಗಳು, 3 ಲೋಕಸಭಾ ಕ್ಷೇತ್ರಗಳ ಮತ ಎಣಿಕೆ

ಕರ್ನಾಟಕದ ಎರಡು ವಿಧಾನಸಭಾ ಕ್ಷೇತ್ರಗಳು ಸೇರಿ ದೇಶದ 29 ವಿಧಾನಸಭಾ ಕ್ಷೇತ್ರಗಳು ಮೂರು ಲೋಕಸಭಾ ಕ್ಷೇತ್ರಗಳ ಮತ ಎಣಿಕೆ ಇಂದು ನಡೆಯುತ್ತಿದೆ. 13 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶ ದಾದ್ರಾ ಮತ್ತು ನಗರ್ ಹವೇಲಿಯಲ್ಲಿ ಎಣಿಕೆ ನಡೆಯುತ್ತಿದೆ.

ಸಿಂದಗಿ ಉಪ ಚುನಾವಣೆ: ಶೇ 69.41ರಷ್ಟು ಮತದಾನ

2018ರಲ್ಲಿ ನಡೆದ ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಶೇ 70.85ರಷ್ಟು ಮತದಾನವಾಗಿತ್ತು. ಶನಿವಾರ ನಡೆದ ಉಪ ಚುನಾವಣೆಯಲ್ಲಿ ಶೇ 69.41 ರಷ್ಟು ಮತದಾನವಾಗಿದೆ.

ಸಿಂದಗಿ ಕಣದಲ್ಲಿ 6 ಅಭ್ಯರ್ಥಿಗಳು

ಸಿಂದಗಿ ಕಣದಲ್ಲಿ 6 ಹಾಗೂ ಹಾನಗಲ್‌ ಕಣದಲ್ಲಿ 13 ಅಭ್ಯರ್ಥಿಗಳಿದ್ದಾರೆ. ಸಿಂದಗಿ ಕ್ಷೇತ್ರದ ಶಾಸಕ ಎಂ.ಸಿ. ಮನಗೂಳಿ ಹಾಗೂ ಹಾನಗಲ್‌ ಕ್ಷೇತ್ರದ ಶಾಸಕ ಸಿ.ಎಂ. ಉದಾಸಿ ಅವರ ಸಾವಿನಿಂದ ತೆರವಾಗಿದ್ದ ಕ್ಷೇತ್ರಗಳಿಗೆ ಉಪಚುನಾವಣೆ ನಡೆದಿದೆ.

ಮತ ಎಣಿಕೆಗೆ ಸಕಲ ಸಿದ್ಧತೆ

ಹಾನಗಲ್‌ ಕ್ಷೇತ್ರದಲ್ಲಿ ಶೇ 83.76ರಷ್ಟು ಮತದಾನ

ಅಕ್ಟೋಬರ್ 30 ರಂದು ನಡೆದ ಮತದಾನದಲ್ಲಿ ಒಟ್ಟಾರೆ 2,04,481 ಮತದಾರರ ಪೈಕಿ 1,71,264 ಜನರು ಮತ ಚಲಾಯಿಸಿದ್ದಾರೆ. ಶೇ 83.76ರಷ್ಟು ಮತ ಚಲಾವಣೆಯಾಗಿದೆ. 463 ಅಂಚೆ ಮತ ಚಲಾವಣೆ ಹಾಗೂ 12 ಸೇವಾ ಮತಗಳು ಚಲಾವಣೆಯಾಗಿವೆ. 263 ಮತಗಟ್ಟೆಗಳ ಪೈಕಿ ಗಡಿಯಂಕನಹಳ್ಳಿಯ 140ರ ಮತಗಟ್ಟೆ ಸಂಖ್ಯೆಯಲ್ಲಿ ಅತಿ ಹೆಚ್ಚು ಶೇ 95.11ರಷ್ಟು ಮತದಾನವಾಗಿದೆ ಹಾಗೂ ಹಾನಗಲ್‌ ನಗರದ 103ರ ಮತಗಟ್ಟೆ ಸಂಖ್ಯೆಯಲ್ಲಿ ಶೇ 66.61ರಷ್ಟು ಕಡಿಮೆ ಮತದಾನವಾಗಿದೆ.

ಬೆಳಿಗ್ಗೆ 8ರಿಂದ ಮತ ಎಣಿಕೆ ಶುರು

ಬೆಳಿಗ್ಗೆ 7.45ಕ್ಕೆ ಅಂಚೆ ಮತಗಳ ಎಣಿಕೆ ಕಾರ್ಯ ಆರಂಭಿಸಲಾಗುತ್ತದೆ. ಬೆಳಿಗ್ಗೆ 8 ಗಂಟೆಗೆ ವಿದ್ಯುನ್ಮಾನ ಮತಯಂತ್ರಗಳ ಮತ ಎಣಿಕೆ ಕಾರ್ಯ ನಡೆಯಲಿದೆ.

ಹಾನಗಲ್‌ನಲ್ಲಿ ಬಿಜೆಪಿ–ಕಾಂಗ್ರೆಸ್‌ ಜಿದ್ದಾಜಿದ್ದಿ

ಶಾಸಕರಾಗಿದ್ದ ಸಿ.ಎಂ.ಉದಾಸಿ ನಿಧನರಾದ ಹಿನ್ನೆಲೆಯಲ್ಲಿ ಹಾನಗಲ್‌ ಕ್ಷೇತ್ರಕ್ಕೆ ನಡೆದ ಉಪಚುನಾವಣೆ ಇಡೀ ರಾಜ್ಯದ ಗಮನ ಸೆಳೆದಿದೆ. ಈಗ ಎಲ್ಲರ ಚಿತ್ತ ಮತ ಎಣಿಕೆಯತ್ತ ನೆಟ್ಟಿದೆ. ಬಿಜೆಪಿ ಅಭ್ಯರ್ಥಿ ಶಿವರಾಜ ಸಜ್ಜನರ, ಕಾಂಗ್ರೆಸ್‌ ಅಭ್ಯರ್ಥಿ ಶ್ರೀನಿವಾಸ ಮಾನೆ, ಜೆಡಿಎಸ್‌ ಅಭ್ಯರ್ಥಿ ನಿಯಾಜ್‌ ಶೇಖ್‌ ಸೇರಿದಂತೆ 13 ಅಭ್ಯರ್ಥಿಗಳ ಹಣೆಬರಹ ನಿರ್ಧಾರವಾಗಲಿದೆ. 

ಹಾವೇರಿಯಲ್ಲಿ ಹಾನಗಲ್‌ ಮತ ಎಣಿಕೆ

ಬಿಜೆಪಿ–ಕಾಂಗ್ರೆಸ್‌ ನಡುವಿನ ತೀವ್ರ ಜಿದ್ದಾಜಿದ್ದಿ ಕಣವಾದ ಹಾನಗಲ್‌ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಹಾವೇರಿ ನಗರದ ಸರ್ಕಾರಿ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ನಡೆಯಲಿದೆ.

ಸಿಂದಗಿ ಕ್ಷೇತ್ರ: 22 ಸುತ್ತು ಮತ ಎಣಿಕೆ

ವಿಜಯಪುರ ನಗರದ ಸೈನಿಕ ಶಾಲೆಯ ‘ಒಡೆಯರ ಹೌಸ್’ನಲ್ಲಿ ಸಿಂದಗಿ ಕ್ಷೇತ್ರದ ಮತ ಎಣಿಕೆಗೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ. ಒಟ್ಟು 22 ಸುತ್ತು ಮತ ಎಣಿಕೆ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.