ADVERTISEMENT

ಹುಣಸೂರು ಕ್ಷೇತ್ರ: ಜೆಡಿಎಸ್ ಅಭ್ಯರ್ಥಿ ಜಿ.ಡಿ.ಹರೀಶ್‌ಗೌಡಗೆ ₹55 ಲಕ್ಷ ದೇಣಿಗೆ

​ಪ್ರಜಾವಾಣಿ ವಾರ್ತೆ
Published 5 ಮಾರ್ಚ್ 2023, 19:35 IST
Last Updated 5 ಮಾರ್ಚ್ 2023, 19:35 IST
ಹುಣಸೂರಿನಲ್ಲಿ ಭಾನುವಾರ ನಡೆದ ಜೆಡಿಎಸ್ ಬೂತ್ ಮಟ್ಟದ ಕಾರ್ಯಕರ್ತರ ಸಮಾವೇಶದಲ್ಲಿ ಹರವೆ ಗ್ರಾಮದ ವೀರಶೈವ ಲಿಂಗಾಯತ ಸಮುದಾಯದವರು ಶ್ರೀಧರ್ ಹರವೆ ನೇತೃತ್ವದಲ್ಲಿ ₹ 25 ಲಕ್ಷ ದೇಣಿಗೆಯನ್ನು ಪಕ್ಷದ ಅಭ್ಯರ್ಥಿ ಜಿ.ಡಿ.ಹರೀಶ್‌ಗೌಡಗೆ ಹಸ್ತಾಂತರಿಸಿದರು
ಹುಣಸೂರಿನಲ್ಲಿ ಭಾನುವಾರ ನಡೆದ ಜೆಡಿಎಸ್ ಬೂತ್ ಮಟ್ಟದ ಕಾರ್ಯಕರ್ತರ ಸಮಾವೇಶದಲ್ಲಿ ಹರವೆ ಗ್ರಾಮದ ವೀರಶೈವ ಲಿಂಗಾಯತ ಸಮುದಾಯದವರು ಶ್ರೀಧರ್ ಹರವೆ ನೇತೃತ್ವದಲ್ಲಿ ₹ 25 ಲಕ್ಷ ದೇಣಿಗೆಯನ್ನು ಪಕ್ಷದ ಅಭ್ಯರ್ಥಿ ಜಿ.ಡಿ.ಹರೀಶ್‌ಗೌಡಗೆ ಹಸ್ತಾಂತರಿಸಿದರು   

ಹುಣಸೂರು (ಮೈಸೂರು ಜಿಲ್ಲೆ): ವಿಧಾನಸಭೆ ಚುನಾವಣೆ ಘೋಷಣೆಗೂ ಮುನ್ನವೇ ಹುಣಸೂರು ವಿಧಾನಸಭಾ ಕ್ಷೇತ್ರದಲ್ಲಿ ಅಖಾಡ ರಂಗೇರಿದೆ. ಈ ಚುನಾವಣೆಯಲ್ಲಿ ಜೆಡಿಎಸ್‌ ಗೆಲ್ಲಿಸಲೇಬೇಕು ಎಂಬ ಹಟಕ್ಕೆ ಬಿದ್ದಿರುವ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಘೋಷಿತ ಅಭ್ಯರ್ಥಿ ಶಾಸಕ ಜಿ.ಟಿ.ದೇವೇಗೌಡ ಪುತ್ರ ಜಿ.ಡಿ.ಹರೀಶ್‌ಗೌಡಗೆ ಭರಪೂರ ದೇಣಿಗೆ ನೀಡುತ್ತಿದ್ದಾರೆ.

ಭಾನುವಾರ ನಡೆದ ಜೆಡಿಎಸ್ ಬೂತ್ ಮಟ್ಟದ ಕಾರ್ಯಕರ್ತರ ಸಮಾವೇಶದಲ್ಲಿ ಹರವೆ ಗ್ರಾಮದ ವೀರಶೈವ ಲಿಂಗಾಯತ ಸಮುದಾಯಕ್ಕೆ ಸೇರಿದ ಉದ್ಯಮಿ ಶ್ರೀಧರ್ ನೇತೃತ್ವದಲ್ಲಿ ಅಭಿಮಾನಿಗಳ ತಂಡ ₹ 25 ಲಕ್ಷ ದೇಣಿಗೆ ನೀಡಿದರೆ, ಚೆಲ್ಲಹಳ್ಳಿಯ ಉದ್ಯಮಿ ಮಂಜು ₹ 30 ಲಕ್ಷದ ಚೆಕ್ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT