ADVERTISEMENT

ಇಂಟರ್‌ನ್ಯಾಷನಲ್‌ ಪಕ್ಷ ಸೇರಲು ಹೋದವರು ವೈಎಸ್‌ವಿ ದತ್ತ: ಎಚ್‌ಡಿಕೆ ವ್ಯಂಗ್ಯ

​ಪ್ರಜಾವಾಣಿ ವಾರ್ತೆ
Published 7 ಏಪ್ರಿಲ್ 2023, 7:13 IST
Last Updated 7 ಏಪ್ರಿಲ್ 2023, 7:13 IST
ಎಚ್‌.ಡಿ.ಕುಮಾರಸ್ವಾಮಿ ಮತ್ತು ವೈಎಸ್‌ವಿ ದತ್ತ
ಎಚ್‌.ಡಿ.ಕುಮಾರಸ್ವಾಮಿ ಮತ್ತು ವೈಎಸ್‌ವಿ ದತ್ತ   

ಚಿಕ್ಕಮಗಳೂರು: ‘ವೈಎಸ್‌ವಿ ದತ್ತ ಅವರ ಬಗ್ಗೆ ನನಗೆ ಗೊತ್ತಿಲ್ಲ. ಅವರಲ್ಲ ದೊಡ್ಡವರು’ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಶುಕ್ರವಾರ ಪ್ರತಿಕ್ರಿಯಿಸಿದರು.

ಬೀರೂರಿನಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ‘ನಮ್ಮದ ಸಣ್ಣ ಪಕ್ಷ. ಅವರು ಇಂಟರ್‌ನ್ಯಾಷನಲ್‌ ಪಕ್ಷ ಸೇರಲು ಹೋದವರು. ನಮ್ಮ ಪಕ್ಷದಲ್ಲಿ ಅವರಿಗೇನು ಸಿಗುತ್ತದೆ’ ಎಂದು ಛೇಡಿಸಿದರು.

‘ಈಗಾಗಲೇ ಟಿಕೆಟ್‌ ಘೋಷಿಸಿರುವ ಅಭ್ಯರ್ಥಿ ಕ್ಷೇತ್ರದಲ್ಲಿ ಕ್ರಿಯಾಶೀಲರಾಗಿಲ್ಲದಿದ್ದರೆ ಕರೆಸಿ ಚರ್ಚಿಸುತ್ತೇನೆ. ಬದಲಾವಣೆ ಮಾಡಬೇಕಾದ ಸ್ಥಿತಿ ಇದ್ದರೆ ಮಾಡುತ್ತೇವೆ’ ಎಂದು ತಿಳಿಸಿದರು.

‘ಜೆಡಿಎಸ್‌ ಎರಡನೇ ಪಟ್ಟಿ ಸದ್ಯದಲ್ಲೇ ಬಿಡುಗಡೆಯಾಗಲಿದೆ. ಹಾಸನ ವಿಧಾನಸಭಾ ಕ್ಷೇತ್ರದ ಟಿಕೆಟ್‌ ವಿಚಾರಕ್ಕೆ ಸಂಬಂಧಿಸಿದಂತೆ ನನ್ನ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ. ನಿಷ್ಠಾವಂತರ ಕಾರ್ಯಕರ್ತರಿಗೇ ಟಿಕೆಟ್‌ ನೀಡುತ್ತೇವೆ’ ಎಂದು ಉತ್ತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT