ADVERTISEMENT

ದೇವನಹಳ್ಳಿ: ಶಾಸಕ ನಿಸರ್ಗ ನಾರಾಯಣಸ್ವಾಮಿ ಪತ್ನಿಯಿಂದ ಶಿಕ್ಷಕಿಯರಿಗೆ ಸೀರೆ ಹಂಚಿಕೆ

​ಪ್ರಜಾವಾಣಿ ವಾರ್ತೆ
Published 11 ಮಾರ್ಚ್ 2023, 19:32 IST
Last Updated 11 ಮಾರ್ಚ್ 2023, 19:32 IST
ದೇವನಹಳ್ಳಿಯ ಗುರು ಭವನದಲ್ಲಿ ಸರ್ಕಾರಿ ಶಿಕ್ಷಕರ ಸಂಘದ ಸದಸ್ಯರಿಗೆ ಶಾಸಕರ ನಿಸರ್ಗ ಅವರ ಪತ್ನಿ ನಾಗರತ್ನ ಉಡುಗೊರೆ ನೀಡಿದರು
ದೇವನಹಳ್ಳಿಯ ಗುರು ಭವನದಲ್ಲಿ ಸರ್ಕಾರಿ ಶಿಕ್ಷಕರ ಸಂಘದ ಸದಸ್ಯರಿಗೆ ಶಾಸಕರ ನಿಸರ್ಗ ಅವರ ಪತ್ನಿ ನಾಗರತ್ನ ಉಡುಗೊರೆ ನೀಡಿದರು   

ದೇವನಹಳ್ಳಿ (ಬೆಂಗಳೂರು ಗ್ರಾಮಾಂತರ): ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಗುರುಭವನದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಸರ್ವಸದಸ್ಯರ ಸಭೆಯಲ್ಲಿ ದೇವನಹಳ್ಳಿ ಶಾಸಕ ನಿಸರ್ಗ ನಾರಾಯಣಸ್ವಾಮಿ ಅವರ ಪತ್ನಿ ನಾಗರತ್ನ ಸಂಘದ ಪದಾಧಿಕಾರಿಗಳು ಮತ್ತು ಶಿಕ್ಷಕಿಯರಿಗೆ ಬಾಗಿನದೊಂದಿಗೆ ಸೀರೆ ಹಂಚಿದರು.

‘ಪ್ರತಿ ವರ್ಷದಂತೆ ಈ ಬಾರಿಯೂ ಮಹಿಳಾ ದಿನ ಆಚರಿಸಲಾಗಿದೆ. ಶಾಸಕರ ಪತ್ನಿ ಸೀರೆ ಹಂಚುವ ವಿಚಾರ ನಮಗೆ ತಿಳಿದಿರಲಿಲ್ಲ. ಜೆಡಿಎಸ್‌ ಚಿಹ್ನೆ ಇರುವ ಉಡುಗೊರೆ ನೀಡಿರುವುದಕ್ಕೂ ಸರ್ಕಾರಿ ಶಿಕ್ಷಕರ ಸಂಘಕ್ಕೂ ಯಾವುದೇ ಸಂಬಂಧವಿಲ್ಲ’ ಎಂದು ಶಿಕ್ಷಕರ ಸಂಘದ ಪದಾಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ.

ಶಾಸಕರ ಪತ್ನಿ ಕೆಲವು ದಿನಗಳ ಹಿಂದೆ ತಮ್ಮ ಮನೆಯ ಮುಂದೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಆಶಾ ಕಾರ್ಯಕರ್ತರು, ಅಂಗನವಾಡಿ ಶಿಕ್ಷಕಿಯರು, ಅಡುಗೆ ಸಹಾಯಕರಿಗೆ ಸೀರೆ ಹಂಚಿದ್ದರು.

ADVERTISEMENT

ಶಾಸಕರ ಭಾವ ಚಿತ್ರ ಮತ್ತು ಜೆಡಿಎಸ್‌ ಚಿಹ್ನೆ ಇರುವ ಕೈಚೀಲದೊಳಗೆ ಸೀರೆ ಇಟ್ಟು ಶಿಕ್ಷಕಿಯರಿಗೆ ಉಡುಗೊರೆ ನೀಡುವ ಪೋಟೊ ಮತ್ತು ವಿಡಿಯೊ ತೆಗೆಯದಂತೆ ಸ್ಥಳೀಯ ಪುರಸಭೆ ಸದಸ್ಯರು, ಜೆಡಿಎಸ್‌ ಮುಖಂಡರು ಮಾಧ್ಯಮ ಪ್ರತಿನಿಧಿಗಳಿಗೆ ತಾಕೀತು ಮಾಡಿದರು. ಇದರಿಂದ ಶಿಕ್ಷಕರ ಸಂಘದ ಪದಾಧಿಕಾರಿಗಳು ಹಾಗೂ ಮಾಧ್ಯಮ ಪ್ರತಿನಿಧಿಗಳ ನಡುವೆ ವಾಗ್ವಾದ ನಡೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.