ADVERTISEMENT

ಸಿದ್ದರಾಮಯ್ಯ ಅವರನ್ನೂ ಹೊಡೆದು ಹಾಕಬೇಕು: ಸಚಿವ ಅಶ್ವತ್ಥ್‌ನಾರಾಯಣ್‌ ವಿಡಿಯೋ

​ಪ್ರಜಾವಾಣಿ ವಾರ್ತೆ
Published 15 ಫೆಬ್ರುವರಿ 2023, 15:29 IST
Last Updated 15 ಫೆಬ್ರುವರಿ 2023, 15:29 IST
   

ಮಂಡ್ಯ: ‘ಟಿಪ್ಪು ಎಂದೊಡನೆ ಸಿದ್ದರಾಮಯ್ಯ ಅವರು ಬಂದುಬಿಡುತ್ತಾರೆ. ಉರಿಗೌಡ, ನಂಜೇಗೌಡ ಟಿಪ್ಪುವನ್ನು ಮೇಲಕ್ಕೆ ಕಳುಹಿಸಿದಂತೆ ಇವರನ್ನೂ ಕಳುಹಿಸಬೇಕು, ಹೊಡೆದುಹಾಕಬೇಕು’ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಹೇಳಿರುವ ವಿಡಿಯೊ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಸಾತನೂರು ಗ್ರಾಮದ ಹೊರವಲಯದ ಕಂಬದನರಸಿಂಹಸ್ವಾಮಿ ದೇವಾಲಯದ ಆವರಣದಲ್ಲಿ ಮಂಗಳವಾರ ನಡೆದ ಮಹಾಶಕ್ತಿ ಕೇಂದ್ರದ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದ್ದಾರೆ.

ಸಿದ್ದರಾಮಯ್ಯ ಅವರನ್ನು ಟಿಪ್ಪುವಿಗೆ ಹೋಲಿಸಿದ ಸಚಿವರು ‘ಉರಿಗೌಡ ನಂಜೇಗೌಡ ಏನು ಮಾಡಿದರು’ ಎಂದು ಪ್ರಶ್ನಿಸುತ್ತಾರೆ. ಕಾರ್ಯಕರ್ತರು ಇದಕ್ಕೆ ‘ಮೇಲಕ್ಕೆ ಕಳುಹಿಸಿದರು, ಹೊಡೆದು ಹಾಕಿದರು’ ಎಂದು ಉತ್ತರಿಸುತ್ತಾರೆ. ‘ಅದೇ ರೀತಿ ಇವರನ್ನೂ ಹೊಡೆದು ಹಾಕಬೇಕು, ಮೇಲಕ್ಕೆ ಕಳುಹಿಸಬೇಕು’ ಎಂದು ಸಚಿವರು ಉತ್ತರಿಸುತ್ತಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.