ADVERTISEMENT

ಕೋಲಾರದಲ್ಲಿ ಸಿದ್ದರಾಮಯ್ಯಗೆ ಸೋಲಿನ ವಿದಾಯ: ಇಂಚರ ಗೋವಿಂದರಾಜು

ವರ್ತೂರು ಪ್ರಕಾಶ್‌ ವಿರುದ್ಧ ವಿಧಾನ ಪರಿಷತ್‌ ಸದಸ್ಯ ಗೋವಿಂದರಾಜು, ಶ್ರೀನಾಥ್‌ ವಾಗ್ದಾಳಿ

​ಪ್ರಜಾವಾಣಿ ವಾರ್ತೆ
Published 24 ಜುಲೈ 2022, 5:07 IST
Last Updated 24 ಜುಲೈ 2022, 5:07 IST
ಕೋಲಾರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಜೆಡಿಎಸ್‌ ಮುಖಂಡ ಸಿಎಂಆರ್‌ ಶ್ರೀನಾಥ್‌ ಮಾತನಾಡಿದರು. ಇಂಚರ ಗೋವಿಂದರಾಜು, ಕುರ್ಕೆ ರಾಜೇಶ್ವರಿ, ರಮೇಶ್‌, ನಟರಾಜ್‌ ಇದ್ದಾರೆ
ಕೋಲಾರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಜೆಡಿಎಸ್‌ ಮುಖಂಡ ಸಿಎಂಆರ್‌ ಶ್ರೀನಾಥ್‌ ಮಾತನಾಡಿದರು. ಇಂಚರ ಗೋವಿಂದರಾಜು, ಕುರ್ಕೆ ರಾಜೇಶ್ವರಿ, ರಮೇಶ್‌, ನಟರಾಜ್‌ ಇದ್ದಾರೆ   

ಕೋಲಾರ: ‘ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೋಲಾರ ಕ್ಷೇತ್ರದಲ್ಲಿ ಸ್ಪರ್ಧಿಸಿದರೆ ಸಿದ್ದರಾಮಯ್ಯ ಅವರನ್ನು ಸೋಲಿಸಿ, ವಿದಾಯ ಹೇಳಿ ಕಳುಹಿಸುತ್ತೇವೆ’ ಎಂದು ವಿಧಾನ ಪರಿಷತ್‌ ಸದಸ್ಯ ಜೆಡಿಎಸ್‌ನ ಇಂಚರ ಗೋವಿಂದರಾಜು ಅವರು ಹೇಳಿದರು.

‘75ನೇ ಜನ್ಮದಿನದ ನೆಪದಲ್ಲಿ ದಾವಣಗೆರೆಯಲ್ಲಿ ಆಯೋಜಿರುವುದು ಸಿದ್ದರಾಮಯ್ಯ ಅವರ ರಾಜಕೀಯ ಜೀವನಕ್ಕೆ ವಿದಾಯ ಹೇಳುವ ಸಮಾರಂಭ ಎಂಬುದಾಗಿ ಈಗ ಚರ್ಚೆ ನಡೆಯುತ್ತಿದೆ. ಕೋಲಾರಕ್ಕೆ ಬಂದರೆ ಅವರನ್ನು ಇಲ್ಲಿನ ಜನ ಸೋಲಿಸಿ ಬೀಳ್ಕೊಡುಗೆ ನೀಡಿ ಕಳುಹಿಸುತ್ತಾರೆ’ ಎಂದು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ವರ್ತೂರು ಪ್ರಕಾಶ್‌ ಅವರಿಗೆ ತಿರುಗೇಟು ನೀಡಿ, ‘ಈಗಾಗಲೇ 3 ಬಾರಿ ಬಿಜೆಪಿಗೆ ಹೋಗಿ ಬಂದಿದ್ದಾರೆ. ಸದ್ಯ ಕೋಲಾರ ಕ್ಷೇತ್ರದಲ್ಲಿ ಬಿಜೆಪಿಗೆ ಯಾರೂ ಇರಲಿಲ್ಲ. ರೊಟ್ಟಿ ಹಳಸಿತ್ತು, ನಾಯಿ ಹಸಿದಿತ್ತು ಎಂಬಂತೆ ಆ ಪಕ್ಷಕ್ಕೆ ಒಬ್ಬರು ಬೇಕಾಗಿತ್ತು’ ಎಂದು ವ್ಯಂಗ್ಯವಾಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.