ADVERTISEMENT

9 ಆನೆಗಳಿಗೆ ರೇಡಿಯೊ ಕಾಲರ್‌: ಆನಂದ್‌ ಸಿಂಗ್‌

​ಪ್ರಜಾವಾಣಿ ವಾರ್ತೆ
Published 12 ಮಾರ್ಚ್ 2020, 20:53 IST
Last Updated 12 ಮಾರ್ಚ್ 2020, 20:53 IST
 ಆನಂದ್‌ ಸಿಂಗ್‌
ಆನಂದ್‌ ಸಿಂಗ್‌   

ಬೆಂಗಳೂರು: ಮಾನವ–ಪ್ರಾಣಿ ಸಂಘರ್ಷ ತಪ್ಪಿಸಲು ಒಂಬತ್ತು ಆನೆಗಳಿಗೆ ರೇಡಿಯೊ ಕಾಲರ್ ಅಳವಡಿಸಲಾಗಿದೆ. ಈ ಆನೆಗಳು ನಾಡಿನ ಹತ್ತಿರ ಬಂದ ಕೂಡಲೇ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಸ್ಥಳೀಯ ಜನರಿಗೆ ಎಸ್‌ಎಂಎಸ್‌ ಮೂಲಕ ಮಾಹಿತಿ ನೀಡಲಾಗುತ್ತದೆ ಎಂದು ಅರಣ್ಯ ಸಚಿವ ಆನಂದ್‌ ಸಿಂಗ್‌ ಹೇಳಿದರು.

ವಿಧಾನಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿಯ ಅಪ್ಪಚ್ಚು ರಂಜನ್‌ ಪ್ರಶ್ನೆಗೆ ಉತ್ತರಿಸಿದ ಅವರು, ‘ಆನೆ ಕಾರಿಡಾರ್‌ ಕಿರಿದಾಗುತ್ತಿರುವುದರಿಂದ ಆನೆಗಳು ನಾಡಿಗೆ ನುಗ್ಗುತ್ತಿವೆ. ಗಣಿ ಬಾಧಿತ ಪ್ರದೇಶಗಳ ಪುನಶ್ಚೇತನ ಯೋಜನೆಯ ಹಣ ಬಳಸಿ ಜಾಗ ಖರೀದಿ ಮಾಡಿ ಕಾರಿಡಾರ್ ವ್ಯಾಪ್ತಿಯನ್ನು ಹಿಗ್ಗಿಸಲಾಗುವುದು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT