ADVERTISEMENT

ಸಚಿವ ಸಂಪುಟ: ಮಧ್ಯ ಕರ್ನಾಟಕಕ್ಕೆ ಅನ್ಯಾಯವಾಗಿದೆ ಎಂದ ರೇಣುಕಾಚಾರ್ಯ

​ಪ್ರಜಾವಾಣಿ ವಾರ್ತೆ
Published 13 ಜನವರಿ 2021, 5:28 IST
Last Updated 13 ಜನವರಿ 2021, 5:28 IST
ಎಂ.ಪಿ.ರೇಣುಕಾಚಾರ್ಯ
ಎಂ.ಪಿ.ರೇಣುಕಾಚಾರ್ಯ   

ಬೆಂಗಳೂರು: 'ನೇರ, ನಿಷ್ಠುರ ಮಾತುಗಳೇ ನನಗೆ ಮುಳುವಾಯಿತು. ಲಾಬಿ ಮಾಡಿದವರು ಸಚಿವರಾಗುತ್ತಾರೆ. ಯಾರ ಬಳಿಯೂ ಲಾಬಿ ಮಾಡುವ ಹವ್ಯಾಸ ನನಗೆ ಇಲ್ಲ' ಎಂದು ಸಚಿವ ಸ್ಥಾನ ಆಕಾಂಕ್ಷಿಯಾಗಿರುವ, ಶಾಸಕ ಎಂ.ಪಿ. ರೇಣುಕಾಚಾರ್ಯ ಪ್ರತಿಕ್ರಿಯಿಸಿದ್ದಾರೆ.

ಸುದ್ದಿಗಾರರ ಜೊತೆ ಬುಧವಾರ ಮಾತನಾಡಿದ ಅವರು, 'ವೈಯಕ್ತಿಕವಾಗಿ ನನಗೆ ಬೇಸರವಾಗಿದೆ. ನಾನು ಯಾವುದೇ ಲಾಬಿ ಮಾಡಲಿಲ್ಲ.‌ ಅದು ನನ್ನ ಸ್ವಯಂಕೃತ ಅಪರಾಧ. ಮಂತ್ರಿಗಿರಿ ಕೊಡಿ ಎಂದು ಯಾರಿಗೂ ನಾನು ಅರ್ಜಿ ಹಾಕಲ್ಲ' ಎಂದರು.

'ಇದು ಬೆಂಗಳೂರು -ಬೆಳಗಾವಿ ಕ್ಯಾಬಿನೆಟ್ ಆಗಿದೆ. ಮಧ್ಯ ಕರ್ನಾಟಕಕ್ಕೆ ಅನ್ಯಾಯವಾಗಿದೆ. ನನಗೆ ಬೇಸರವಾಗಿದೆ. ನಾವು ಯಾರ ಮುಂದೆ ಆಸಮಾಧಾನ ಹೇಳಿಕೊಳ್ಳಬೇಕು.‌ ಸ್ವಾಭಿಮಾನ ಬಿಟ್ಟು ಬದುಕುವ ವ್ಯಕ್ತಿ ನಾನಲ್ಲ.‌ ಕ್ಷೇತ್ರದ ಜನ ಹೇಳಿದಂತೆ ಕೇಳುವ ವ್ಯಕ್ತಿ ನಾನು.' ಎಂದೂ ಅವರು ಆಕ್ರೋಶ ವ್ಯಕ್ತಪಡಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.