ADVERTISEMENT

ಶಾಸಕರು ದೆಹಲಿಗೆ ಹೋದರೆ ತಪ್ಪೇನು: ನಳೀನ್ ಕುಮಾರ್ ಕಟೀಲ್ ಪ್ರಶ್ನೆ

​ಪ್ರಜಾವಾಣಿ ವಾರ್ತೆ
Published 15 ಜುಲೈ 2021, 12:41 IST
Last Updated 15 ಜುಲೈ 2021, 12:41 IST
ನಳೀನ್ ಕುಮಾರ್ ಕಟೀಲ್
ನಳೀನ್ ಕುಮಾರ್ ಕಟೀಲ್    

ಕಲಬುರ್ಗಿ: ಪಕ್ಷದ ಶಾಸಕರು ದೆಹಲಿಗೆ ವಿವಿಧ ಕೆಲಸಗಳಿಗಾಗಿ ಹೋಗುತ್ತಾರೆ. ಅವರು ಹೋದರೆ ತಪ್ಪೇನು ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಪ್ರಶ್ನಿಸಿದರು.

ಬೀದರ್ ಗೆ ತೆರಳುವ ಮುನ್ನ ನಗರದ ವಿಮಾನ ನಿಲ್ದಾಣದಲ್ಲಿ ಗುರುವಾರ ಮಾತನಾಡಿದ ಅವರು, ಸದ್ಯಕ್ಕೆ ಬಿಜೆಪಿಯಲ್ಲಿ ಯಾವುದೇ ಗೊಂದಲಗಳಿಲ್ಲ ಎಂದರು‌.

ಅಧಿವೇಶನದ ವೇಳೆಗೆ ಮುಖ್ಯಮಂತ್ರಿ ಅವರು ದೆಹಲಿಗೆ ಹೋಗುವ ಪರಿಪಾಠವಿದೆ. ಹೀಗಾಗಿ ಹೋಗುತ್ತಿದ್ದಾರೆ. ಸಚಿವ ಸಂಪುಟ ವಿಸ್ತರಣೆ ಅವರ ವಿವೇಚನೆಗೆ ಬಿಟ್ಟದ್ದು ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ADVERTISEMENT

ಜಗತ್ತಿನಲ್ಲಿ ಅತಿ ಹೆಚ್ಚು ಲಸಿಕೆ ನೀಡಿದ ದೇಶ ಭಾರತ. ಎಲ್ಲಾ ಕಡೆ ಲಸಿಕೆ ಇದೆ, ಇದೀಗ ಐದು ಕಂಪನಿಗಳು ಲಸಿಕೆ ನೀಡುತ್ತಿವೆ. ಡಿಸೆಂಬರ್ ನೊಳಗಾಗಿ ಎಲ್ಲರಿಗೂ ‌ಲಸಿಕೆ ನೀಡುವ ಗುರಿ ಹೊಂದಲಾಗಿದೆ ‌ಎಂದರು.

ರಾಜ್ಯದಲ್ಲಿ ಚುನಾವಣೆಗೆ ಇನ್ನೂ ಎರಡು ವರ್ಷವಿದೆ. ಆದರೆ ಈಗಲೇ ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿ ಹುದ್ದೆಗೆ‌ ಸ್ಪರ್ಧೆ ನಡೆದಿದೆ. ಸಿ.ಎಂ. ಹುದ್ದೆಗೆ ಸಂಗೀತ ಖುರ್ಚಿ ಆಟ ಜೋರಾಗಿ ನಡೆದಿದೆ. ಸಿದ್ದರಾಮಯ್ಯ ರಾಜ್ಯದ ಜನರಿಗೆ ಬಹುದೊಡ್ಡ ವಂಚನೆ ಮಾಡಿದ್ದಾರೆ ಮೊದಲು ಅಹಿಂದದ ಹೆಸರು ಹೇಳಿ ಸಿ.ಎಂ. ಆದರು. ನಂತರ ಆ ಸಮುದಾಯವನ್ನು ‌ಮರೆತುಬಿಟ್ಟರು ಎಂದು ಕಟೀಲ್ ಟೀಕಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.