ADVERTISEMENT

ಕಾಂಗ್ರೆಸ್‌ ಸರ್ಕಾರದಿಂದಾಗಿ ರಾಜ್ಯದ ಅಭಿವೃದ್ಧಿ ರಿವರ್ಸ್‌ ಗೇರ್‌ನಲ್ಲಿದೆ: BJP

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 18 ಆಗಸ್ಟ್ 2023, 7:21 IST
Last Updated 18 ಆಗಸ್ಟ್ 2023, 7:21 IST
BJP
BJP   

ಬೆಂಗಳೂರು: ಸರ್ಕಾರದ ಸಾಲು ಸಾಲು ವೈಫಲ್ಯಗಳು ರಾಜ್ಯದ ಅಭಿವೃದ್ಧಿಯನ್ನು ರಿವರ್ಸ್ ಗೇರ್‌ನಲ್ಲಿರಿಸಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಟೀಕೆ ಮಾಡಿದೆ.

ನಿರ್ಲಕ್ಷ್ಯ ಮಾಡಿದರೆ ಮತ್ತೆ ಪತ್ರ ಬರೆಯುತ್ತೇನೆ ಎಂದು ಶಾಸಕ ಬಿ.ಆರ್ ಪಾಟೀಲ್‌ ಅವರ ಹೇಳಿಕೆಯನ್ನು ಉಲ್ಲೇಖಿಸಿ ಬಿಜೆಪಿ ಈ ರೀತಿ ಹೇಳಿದೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ‘ಎಕ್ಸ್‌’ನಲ್ಲಿ ಬರೆದುಕೊಂಡಿರುವ ಬಿಜೆಪಿ, ರಾಜ್ಯದ ಎಟಿಎಂ ಸರ್ಕಾರದಲ್ಲಿ ಶಾಸಕ-ಸಚಿವರ ಒಳಜಗಳಗಳು ಸದ್ಯಕ್ಕೆ ಮುಗಿಯುವ ಲಕ್ಷಣಗಳು ಕಾಣುತ್ತಿಲ್ಲ.

ADVERTISEMENT

ಸ್ವಪಕ್ಷೀಯ ಶಾಸಕರನ್ನೇ ನಿರ್ಲಕ್ಷಿಸುವ ಸಚಿವರುಗಳು, ಇನ್ನು ಜನ ಸಾಮಾನ್ಯರ ಕಷ್ಟಗಳಿಗೆ ಸ್ಪಂದಿಸುತ್ತಾರೆಯ? ಎಂದು ಪ್ರಶ್ನಿಸಿದೆ.

‘ಭ್ರಷ್ಟಾಚಾರ, ವರ್ಗಾವಣೆ ದಂಧೆ, ಒಳಜಗಳ, ಕುರ್ಚಿ ತಿಕ್ಕಾಟ, ಹೀಗೆ ಕಾಂಗ್ರೆಸ್‌ ಸರ್ಕಾರದ ಸಾಲು ಸಾಲು ವೈಫಲ್ಯಗಳು ರಾಜ್ಯದ ಅಭಿವೃದ್ಧಿಯನ್ನು ರಿವರ್ಸ್ ಗೇರ್‌ನಲ್ಲಿರಿಸಿದೆ’ ಎಂದು ಬಿಜೆಪಿ ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.