ADVERTISEMENT

BJP ಹಾಗೂ SDPI ಸಂಬಂಧ - ಮೇಲೆ ಲಡಾಯಿ, ಒಳಗೊಳಗೆ ಭಾಯಿ ಭಾಯಿ: ಕಾಂಗ್ರೆಸ್‌ ಟೀಕೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 11 ಆಗಸ್ಟ್ 2023, 11:38 IST
Last Updated 11 ಆಗಸ್ಟ್ 2023, 11:38 IST
   

ಬೆಂಗಳೂರು: ಬಿಜೆಪಿ ಹಾಗೂ ಎಸ್‌ಡಿಪಿಐ ಭಾಯಿ ಭಾಯಿ ಎಂದು ಕಾಂಗ್ರೆಸ್‌ ಟೀಕೆ ಮಾಡಿದೆ.

ದಕ್ಷಿಣ ಕನ್ನಡ ಜಿಲ್ಲೆಯ ತಲಪಾಡಿ ಗ್ರಾಮ ಪಂಚಾಯಿತಿಯಲ್ಲಿ ಎಸ್‌ಡಿಪಿಐ ಬೆಂಬಲಿತ ಟಿ.ಇಸ್ಮಾಯಿಲ್‌ ಅಧ್ಯಕ್ಷರಾಗಿ, ಬಿಜೆಪಿ ಬೆಂಬಲಿತ ಪುಷ್ಪಾವತಿ ಶೆಟ್ಟಿ ಉಪಾಧ್ಯಕ್ಷೆಯಾಗಿ ಆಯ್ಕೆಯಾಗಿದ್ದನ್ನು ಉಲ್ಲೇಖಿಸಿ ಕಾಂಗ್ರೆಸ್‌ ಸಾಮಾಜಿಕ ಜಾಲತಾಣ ‘ಎಕ್ಸ್‌’ನಲ್ಲಿ ಹೀಗೆ ಟೀಕೆ ಮಾಡಿದೆ.

‘ಬಿಜೆಪಿ ಹಾಗೂ SDPI ಸಂಬಂಧ - ಮೇಲೆ ಲಡಾಯಿ, ಒಳಗೊಳಗೆ ಭಾಯಿ ಭಾಯಿ!’ ಎಂದು ಬರೆದುಕೊಂಡಿದೆ.

ADVERTISEMENT

ತಲಪಾಡಿ ಗ್ರಾಮ ಪಂಚಾಯಿತಿಯ ಎರಡನೇ ಅವಧಿಗೆ ಎಸ್‌ಡಿಪಿಐ ಬೆಂಬಲಿತ ಟಿ.ಇಸ್ಮಾಯಿಲ್‌ ಅಧ್ಯಕ್ಷರಾಗಿ, ಬಿಜೆಪಿ ಬೆಂಬಲಿತ ಪುಷ್ಪಾವತಿ ಶೆಟ್ಟಿ ಉಪಾಧ್ಯಕ್ಷೆಯಾಗಿ ಅವಿರೋಧವಾಗಿ ಆಯ್ಕೆಯಾಗಿದ್ದರು.

ಬಿಜೆಪಿ ಬೆಂಬಲಿತರು ಎಸ್‌ಡಿಪಿಐ ಬೆಂಬಲಿತ ಸದಸ್ಯರನ್ನು ಬೆಂಬಲಿಸಿದ ಹಿನ್ನೆಲೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಸತ್ಯರಾಜ್‌ ಪರಾಭವಗೊಂಡಿದ್ದರು.

ಪಂಚಾಯಿತಿಯಲ್ಲಿ ಒಟ್ಟು 24 ಸದಸ್ಯರ ಪೈಕಿ 13 ಬಿಜೆಪಿ ಬೆಂಬಲಿತ ಸದಸ್ಯರಿದ್ದರೆ, ಒಬ್ಬರು ಕಾಂಗ್ರೆಸ್‌ ಹಾಗೂ 10 ಎಸ್‌ಡಿಪಿಐ ಬೆಂಬಲಿತರು ಇದ್ದಾರೆ. ಗುರುವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ ಬೆಂಬಲಿತ ವೈಭವ್ ವೈ. ಶೆಟ್ಟಿ ಮತ್ತು ಎಸ್‌ಡಿಪಿಐ ಬೆಂಬಲಿತ ಹಬೀಬಾ ಡಿ.ಬಿ ಗೈರು ಹಾಜರಾಗಿದ್ದರು. ‌

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.