ADVERTISEMENT

Karnataka Budget: ಮೇಕೆದಾಟು ಯೋಜನೆಗೆ ₹1,000 ಕೋಟಿ ಮೀಸಲು–ಬೊಮ್ಮಾಯಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 4 ಮಾರ್ಚ್ 2022, 7:45 IST
Last Updated 4 ಮಾರ್ಚ್ 2022, 7:45 IST
ಮೇಕೆದಾಟು
ಮೇಕೆದಾಟು    

ಬೆಂಗಳೂರು: ರಾಜ್ಯದ ಉದ್ದೇಶಿತ ಮೇಕೆದಾಟು ಯೋಜನೆ ಸೇರಿದಂತೆ ಪ್ರಮುಖ ನೀರಾವರಿಯೋಜನೆಗಳಿಗೆ ಬಜೆಟ್‌ನಲ್ಲಿಆದ್ಯತೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ತಮ್ಮ 2022–23 ನೇ ಸಾಲಿನ ಬಜೆಟ್ ಭಾಷಣದಲ್ಲಿ ಅವರು ಈ ವಿಷಯ ತಿಳಿಸಿದರು.

ಕೇಂದ್ರ ಸರ್ಕಾರ ಮೇಕೆದಾಟು ಯೋಜನೆಗೆ ಹಸಿರು ನಿಶಾನೆ ತೋರಿಸಿದ ನಂತರ ಯೋಜನೆ ಆರಂಭಿಸಲು ಬಜೆಟ್‌ನಲ್ಲಿ ₹1,000ಕೋಟಿ ತೆಗೆದಿರಿಸಲಾಗುವುದು ಎಂದು ಬೊಮ್ಮಾಯಿ ತಿಳಿಸಿದರು.

ADVERTISEMENT

ಕೃಷ್ಣಾ ಮೇಲ್ದಂಡೆ ಹಂತ 3ಕ್ಕೆ ₹5000 ಕೋಟಿ ನೀಡಲಾಗಿದೆ ಎಂದು ಸಿಎಂ ತಿಳಿಸಿದ್ದಾರೆ.

ಕಳಸಾ ಬಂಡೂರಿಗಾಗಿ ₹1000 ಕೋಟಿ ತೆಗೆದಿಡಲಾಗುವುದು ಎಂದು ಸಿಎಂ ತಿಳಿಸಿದರು.

ಭದ್ರಾ ಮೇಲ್ದಂಡೆ ಯೋಜನೆಗಾಗಿ ₹3000 ಕೋಟಿ ನೀಡಲಾಗುವುದು ಎಂದು ಸಿಎಂ ಹೇಳಿದರು.

ಎತ್ತಿನಹೊಳಿ ಯೋಜನೆಗಾಗಿ ₹3000 ಕೋಟಿ ಕೊಡಲಾಗುವುದು ಎಂದು ಬೊಮ್ಮಾಯಿ ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.