ಹಿರೇಕೆರೂರ: ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ರಟ್ಟೀಹಳ್ಳಿ ಕಬ್ಬಿಣಕಂಥಿಮಠದ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ ಸ್ಪರ್ಧಿಸಲಿದ್ದಾರೆ ಎಂಬ ಮಾಹಿತಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಜನತೆಯಲ್ಲಿ ಸಂಚಲನ ಮೂಡಿಸಿದೆ.
ಈ ಬಗ್ಗೆ ಗುರುವಾರ 'ಪ್ರಜಾವಾಣಿ'ಗೆ ಪ್ರತಿಕ್ರಿಯೆ ನೀಡಿದ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ, 'ಚುನಾವಣೆಗೆ ಸ್ಪರ್ಧಿಸುವಂತೆ ಬಹಳಷ್ಟು ಭಕ್ತರು ಕೇಳಿಕೊಳ್ಳುತ್ತಿದ್ದಾರೆ. ಇದರ ಬಗ್ಗೆ ಚರ್ಚಿಸಲು ಶುಕ್ರವಾರ (ನ.15) ಬೆಳಿಗ್ಗೆ 11ಕ್ಕೆ ಮಠದಲ್ಲಿ ಸಭೆ ಕರೆಯಲಾಗಿದೆ. ಜನಾಭಿಪ್ರಾಯ ತಿಳಿದು ವಿವೇಚನಾಯುಕ್ತ ತೀರ್ಮಾನ ಘೋಷಣೆ ಮಾಡುತ್ತೇನೆ' ಎಂದು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.