ADVERTISEMENT

ಪವಿತ್ರ ಸರ್ಕಾರಕ್ಕೆ ಮುದ್ರೆ ಒತ್ತಿರುವುದಕ್ಕೆ ಅಭಿನಂದನೆಗಳು: ಕುಮಾರಸ್ವಾಮಿ

​ಪ್ರಜಾವಾಣಿ ವಾರ್ತೆ
Published 9 ಡಿಸೆಂಬರ್ 2019, 9:26 IST
Last Updated 9 ಡಿಸೆಂಬರ್ 2019, 9:26 IST
   

ಬೆಂಗಳೂರು: 'ಪವಿತ್ರ' ಮತ್ತು 'ಸುಭದ್ರ' ಸರ್ಕಾರಕ್ಕೆ ಜನರು ಮುದ್ರೆ ಒತ್ತಿರುವುದಕ್ಕೆ ನನ್ನ ಮನದಾಳದ ಅಭಿನಂದನೆಗಳು ಎಂದು ಜೆಡಿಎಸ್‌ ನಾಯಕ ಎಚ್‌.ಡಿ.ಕುಮಾರಸ್ವಾಮಿ ಟ್ವೀಟ್‌ ಮಾಡಿದ್ದಾರೆ.

ಇದೊಂದು "ಅಸಹ್ಯ" ಸರ್ಕಾರ ಎಂದು ಬಿಜೆಪಿಯ ಹಿರಿಯ ನಾಯಕರೊಬ್ಬರು ಮೂದಲಿಸಿದ್ದ ಮಾತಿಗೆ ಸಹಮತ ವ್ಯಕ್ತಪಡಿಸುವಂತೆ ರಾಜ್ಯದ 15 ಕ್ಷೇತ್ರಗಳ ಪ್ರಜ್ಞಾವಂತ ಮತದಾರರು 'ಪವಿತ್ರ' ಮತ್ತು 'ಸುಭದ್ರ' ಸರ್ಕಾರಕ್ಕೆ ಮುದ್ರೆ ಒತ್ತಿರುವುದಕ್ಕೆ ಮನದಾಳದ ಅಭಿನಂದನೆಗಳು ಎಂದು ಹೇಳಿದ್ದಾರೆ.

15 ಕ್ಷೇತ್ರಗಳಉಪಚುನಾವಣೆಯಲ್ಲಿ ಬಿಜೆಪಿ 12, ಕಾಂಗ್ರೆಸ್‌ 2 ಸ್ಥಾನಗಳನ್ನು ಪಡೆದಿದ್ದು ಜೆಡಿಎಸ್‌ ಶೂನ್ಯ ಸಂಪಾದನೆ ಮಾಡಿದೆ. ಹೊಸಕೋಟೆಯಲ್ಲಿ ಜೆಡಿಎಸ್‌ ಪಕ್ಷೇತರ ಅಭ್ಯರ್ಥಿ ಶರತ್‌ಗೆ ಬೆಂಬಲ ನೀಡಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.