ADVERTISEMENT

ಬಿಜೆಪಿಗೆ ಶೀಘ್ರವೇ ಸಂಕಷ್ಟ ಕಾಲ: ಶಾಸಕ ಎಚ್‌.ಡಿ. ರೇವಣ್ಣ

​ಪ್ರಜಾವಾಣಿ ವಾರ್ತೆ
Published 16 ನವೆಂಬರ್ 2019, 21:35 IST
Last Updated 16 ನವೆಂಬರ್ 2019, 21:35 IST
ಎಚ್‌.ಡಿ. ರೇವಣ್ಣ
ಎಚ್‌.ಡಿ. ರೇವಣ್ಣ   

ಹೊಳೆನರಸೀಪುರ (ಹಾಸನ): ‘ಸಿದ್ಧಾಂತ ಇಲ್ಲದ ಬಿಜೆಪಿಯಿಂದ ನಾವು ಪಾಠ ಕಲಿಯಬೇಕಿಲ್ಲ. ಉಪಚುನಾವಣೆಯ ನಂತರ ಬಿಜೆಪಿಗೆ ಸಂಕಷ್ಟ ಆರಂಭವಾಗಲಿದೆ. ಜನ ಬುದ್ಧಿ ಕಲಿಸಲು ಸಜ್ಜಾಗಿದ್ದಾರೆ’ ಎಂದು ಶಾಸಕ ಎಚ್‌.ಡಿ. ರೇವಣ್ಣ ಹೇಳಿದರು.

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಮ್ಮಿಶ್ರ ಸರ್ಕಾರವನ್ನು ಬೀಳಿಸಲು ಷಡ್ಯಂತ್ರ ನಡೆಯುತ್ತಿದೆ ಎಂದು ರೋಷನ್‌ಬೇಗ್, ಮೊದಲೇ ದೇವೇಗೌಡರಿಗೆ ತಿಳಿಸಿ‌ದ್ದರು. ಅವರೊಬ್ಬ ಸಜ್ಜನ ರಾಜಕಾರಣಿ. ಅವರನ್ನು ಕಾಂಗ್ರೆಸ್‌ ಸರಿಯಾಗಿ ನಡೆಸಿಕೊಳ್ಳದ ಕಾರಣ ಸ್ವಾಭಿಮಾನಿಯಾದ ಅವರು ಕಾಂಗ್ರೆಸ್‌ನಿಂದ ಅಂತರ ಕಾಯ್ದುಕೊಂಡಿದ್ದಾರೆ. ಅವರು ನಮ್ಮ ಪಕ್ಷಕ್ಕೆ ಬರುವುದಾದರೆ ಸ್ವಾಗತಿಸುತ್ತೇವೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT