ಶಿವಮೊಗ್ಗ:ಲೋಕಸಭಾ ಉಪಚುನಾವಣೆಯಲ್ಲಿ ಶಿವಮೊಗ್ಗ ತಾಲೂಕಿನ ಹೊಳೆ ಬೆಳೆಗಲು ಗ್ರಾಮ ಹಾಗೂ ದೊಡ್ಡಮಟ್ಟಿ ಗ್ರಾಮಗಳ ಗ್ರಾಮಸ್ಥರು ಮತದಾನ ಬಹಿಷ್ಕರಿಸಿದ್ದಾರೆ.
ಹೊಳೆಬೆಳಗಲು ಮತಗಟ್ಟೆ ಸಂಖ್ಯೆ152ರಲ್ಲಿ ಮತದಾನ ಮಾಡಲು ಗ್ರಾಮಸ್ಥರು ಬರುತ್ತಿಲ್ಲ. ಈ ಗ್ರಾಮದಲ್ಲಿ 500ಕ್ಕೂ ಹೆಚ್ಚ ಮತದಾರು ಇದ್ದಾರೆ.
ಶಿವಮೊಗ್ಗ ಗ್ರಾಮಾಂತರ ವ್ಯಾಪ್ತಿಯ ದೊಡ್ಡಮಟ್ಟಿ ಯಲ್ಲೂ ಮತದಾನ ಬಹಿಷ್ಕಾರ ಮಾಡಲಾಗಿದೆ.
ಮತಗಟ್ಟೆ ಸಂಖ್ಯೆ 11ಕ್ಕೆ ಮತದಾನ ಮಾಡಲು ಗ್ರಾಮಸ್ಥರು ಬರುತ್ತಿಲ್ಲ. 400ಕ್ಕೂ ಹೆಚ್ಚು ಮತದಾರರು ಈ ಗ್ರಾಮದಲ್ಲಿದ್ದಾರೆ.
ವಿವಿ ಪ್ಯಾಡ್ ಸಮಸ್ಯೆ
ಸಾಗರ ತಾಲ್ಲೂಕಿನ ತಾಳಗುಪ್ಪ ಮತಗಟ್ಟೆ ಸಂಖ್ಯೆ 219ರಲ್ಲಿ ವಿವಿ ಪ್ಯಾಡ್ ಸಮಸ್ಯೆ ಹಿನ್ನಲೆ ಒಂದು ಗಂಟೆ ತಡವಾದರೂ ಮತದಾನ ಆರಂಭವಾಗಿರಲಿಲ್ಲ. ಮತದಾನ ಮಾಡಲು ನೂರಾರು ಮತದಾರರು ಸಾಲುಗಟ್ಟಿ ನಿಂತಿದ್ದರು.
ಗೆಲುವು ನಮ್ಮದೇ: ರಾಘವೇಂದ್ರ
ಶನಿವಾರ ಆಂಜನೇಯ ವಾರ, ದೆವರ ಆಶೀರ್ವಾದ ಪಡೆದು ಮತದಾನ ಮಾಡಿದ್ದೇವೆ. ನೂರಕ್ಕೆ ನೂರರಷ್ಟು ನಾವು ಗೆಲ್ಲುತ್ತೇವೆ. ಕಳದೆ 25 ದಿನಗಳಿಂದ 8 ಕ್ಷೆತ್ರಗಳಲ್ಲಿ ಶಾಸಕರು ಹಾಗೂ ಕಾರ್ಯಕರ್ತರ ಪರಿಶ್ರಮ ಹಾಕಿದ್ದಾರೆ. ಮತ್ತೊಮ್ಮೆ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಗೆದ್ದೆ ಗೆಲ್ಲುತ್ತದೆ ಎಂದು ಬಿಜೆಪಿ ಅಭ್ಯರ್ಥಿ ವಿ.ವೈ.ರಾಘವೇಂದ್ರ ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.