ADVERTISEMENT

ಚುನಾವಣಾ ಪ್ರಚಾರ: ಹಣ ಹಂಚಿದ ಗೋವಿಂದ ಕಾರಜೋಳ

​ಪ್ರಜಾವಾಣಿ ವಾರ್ತೆ
Published 1 ಡಿಸೆಂಬರ್ 2019, 11:17 IST
Last Updated 1 ಡಿಸೆಂಬರ್ 2019, 11:17 IST
ಚುನಾವಣಾ ಪ್ರಚಾರ: ಹಣ ಹಂಚಿದ ಗೋವಿಂದ ಕಾರಜೋಳ
ಚುನಾವಣಾ ಪ್ರಚಾರ: ಹಣ ಹಂಚಿದ ಗೋವಿಂದ ಕಾರಜೋಳ   

ಅಥಣಿ:ಬಿಜೆಪಿ ಅಭ್ಯರ್ಥಿ ಮಹೇಶ ಕುಮಠಳ್ಳಿ ಪರ ಪ್ರಚಾರಕ್ಕೆ ಬಂದಿದ್ದ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಕಾರ್ಯಕರ್ತರೊಬ್ಬರಿಗೆ ₹ 500 ಮುಖಬೆಲೆಯ ನೋಟುಗಳನ್ನು ಹಂಚಿದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಹಣ ನೀಡಿದ ನಂತರ, ವಿಡಿಯೊ ಮಾಡುತ್ತಿದ್ದ ಛಾಯಾಗ್ರಾಹಕರಿಗೆ ಕ್ಯಾಮೆರಾ ಆಫ್ ಮಾಡಿ ಎಂದು ಹೇಳಿದ್ದಾರೆ. ಬೀದರ್ ಸಂಸದ ಭಗವಂತ ಖೂಬಾ ಹಾಗೂ ರಾಯಬಾಗ ಶಾಸಕ ಡಿ.ಎಂ. ಐಹೊಳೆ ಕೂಡ ಡಿಲೀಟ್ ಮಾಡುವಂತೆ ಹೇಳಿದ್ದಾರೆ. ಖೂಬಾ ಕ್ಯಾಮೆರಾ ಕಸಿದುಕೊಳ್ಳುವುದಕ್ಕೆ ಯತ್ನಿಸಿದ್ದು ವಿಡಿಯೊದಲ್ಲಿದೆ.

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮೆರವಣಿಗೆಗೆ ಮುನ್ನ ಈ ಘಟನೆಯು ಮಹೇಶ್ ಕುಮಠಳ್ಳಿ ಮನೆಯಲ್ಲಿ ನಡೆದಿದೆ ಎನ್ನಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.